ಮನೆ ರಾಜ್ಯ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸಾವು

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸಾವು

0

ಮಂಡ್ಯ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.

ತುಮಕೂರು-ಮದ್ದೂರು ಹೆದ್ದಾರಿಯಲ್ಲಿ ಬೆಳಗಿನ ಜಾವ ದುರ್ಘಟನೆ ಸಂಭವಿಸಿದ್ದು, ಗ್ರಾಮದ ನಂಜುಂಡಸ್ವಾಮಿ(38) ಸಾವನ್ನಪ್ಪಿದ್ದಾರೆ.

ಮೃತ ನಂಜುಂಡಸ್ವಾಮಿ ಪೂಜಾ ಕುಣಿತ ಕಲಾವಿದನಾಗಿದ್ದರು. ಅಲ್ಲದೇ ಪೂಜಾ ಕುಣಿತದ ಮೂಲಕ ಸಾಕಷ್ಟು ಹೆಸರು ಮಾಡಿದ್ದರು.

ಕಲಾವಿದನನ್ನು ಕಳೆದು ಕೊಂಡ ಕುಟುಂಬಸ್ಥರು ಹಾಗೂ ಕಲಾವಿದರ ಆಕ್ರಂದನ ಮುಗಿಲು ಮುಟ್ಟಿದೆ

ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹ ರವಾನಿಸಲಾಗಿದೆ.

ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ದಂಗೆ ಎದ್ದಿದ್ದಾರೆ: ಆರ್.ಅಶೋಕ್
ಮುಂದಿನ ಲೇಖನಜ.19 ರಂದು “ಮೇ ಅಟಲ್‌ ಹೂಂ’ ಸಿನಿಮಾ ತೆರೆಗೆ