ಮೈಸೂರು: ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕೊಲೆ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿ. ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದ ಸಮೀಪದ ಜೀನುಗುಡ್ಡ ಬಳಿ ಸುಮಾರು 170 ಎಕರೆ ಗೋಮಾಳವಿದೆ. ಅದರಲ್ಲಿ 15 ಗುಂಟೆಯಷ್ಟು ಜಾಗದಲ್ಲಿ ಶಿವಲಿಂಗು (62) ಹಾಗೂ ಭಾರತಿ (55) ದಂಪತಿ ಬೇಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಜಾಗದಲ್ಲಿ ತನಗೂ ಪಾಲು ಕೊಡುವಂತೆ ಶಿವಲಿಂಗು ಸಹೋದರ ಹನುಮಂತು (60) ಆಗಾಗ ಅಣ್ಣನ ಜೊತೆ ಜಗಳವಾಡುತ್ತಿದ್ದ ಎನ್ನಲಾಗುತ್ತಿದೆ.
ಜಮೀನಿನಲ್ಲಿ ಪಾಲು ಕೊಡುವ ಸಂಬಂಧ ಆನೇಕ ಬಾರಿ ಗ್ರಾಮದಲ್ಲಿ ಶಿವಲಿಂಗು ಮತ್ತು ಹನುಮಂತು ನಡುವೆ ಆನೇಕ ಬಾರಿ ರಾಜಿ ಸಂಧಾನ ನಡೆದಿತ್ತು. ಇದರಿಂದ ಯಾವುದೇ ಪ್ರಯೋಜನ ಆಗಿರಲಿಲ್ಲ. ಆಗಾಗ ಇದೇ ವಿಷಯಕ್ಕೆ ಸಹೋದರರ ಮಧ್ಯೆ ಹಲವು ಸಲ ಜಗಳ ನಡೆದಿತ್ತು. ಇದರ ಬಗ್ಗೆ ತಲೆಕೆಡಿಸಿಕೊಳ್ಳದೇ ದಂಪತಿ ತಮ್ಮ ಪಾಡಿಗೆ ತಾವು ಇದ್ದರು.
ಆದರೆ, ಮಂಗಳವಾರ ಮಧ್ಯಾಹ್ನ ಭಾರತಿ ಮತ್ತು ಶಿವಲಿಂಗು ದಂಪತಿ ಎಂದಿನಂತೆ ಜಮೀನಿನಲ್ಲಿ ಕೆಲಸ ಮಾಡಲು ಬಂದಿದ್ದರು. ಆಗ ಅಲ್ಲಿಗೆ ಬಂದ ಹನುಮಂತು ಜಗಳ ತೆಗೆದು, ತನಗೂ ಈ ಜಮೀನಿನಲ್ಲಿ ಪಾಲು ಕೊಡಲು ಕೇಳಿದ್ದಾನೆ. ಇಲ್ಲದಿದ್ದರೆ ಸಂಪೂರ್ಣ ಜಮೀನನ್ನು ಬಿಟ್ಟುಕೊಡಿ ಎಂದು ಕೂಗಾಡಲಾರಂಭಿಸಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿ, ಯಾವುದೇ ಕಾರಣಕ್ಕೂ ಜಮೀನು ಬಿಟ್ಟುಕೊಡುವುದಿಲ್ಲ ಎಂದು ಶಿವಲಿಂಗು ಹೇಳಿದಾಗ, ಕುಪಿತಗೊಂಡ ಹನುಮಂತು ಅಲ್ಲೇ ಬಿದ್ದಿದ್ದ ಗುದ್ದಲಿಯಿಂದ ಅಣ್ಣನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಜೊತೆಗೆ ತಡೆಯಲು ಬಂದ ಅತ್ತಿಗೆ ತಲೆಗೂ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಬಳಿಕ ಹನುಮಂತು ತಾನೇ ಪೊಲೀಸ್ ಠಾಣೆಗೆ ಕರೆ ಮಾಡಿ, ಅಣ್ಣ ಮತ್ತು ಅತ್ತಿಗೆಯನ್ನು ನಾನೇ ಕೊಲೆ ಮಾಡಿದ್ದೇನೆ ಎಂದು ಹೇಳಿ, ಸ್ವಲ್ಪ ಹೊತ್ತಿನ ಬಳಿಕ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಮೈಸೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.