ಮನೆ ರಾಷ್ಟ್ರೀಯ ಭಾರತದ ಸಂವಿಧಾನವನ್ನು ರಕ್ಷಿಸುವ ತುರ್ತು ಅಗತ್ಯವಿದೆ: ಮಲ್ಲಿಕಾರ್ಜುನ ಖರ್ಗೆ 

ಭಾರತದ ಸಂವಿಧಾನವನ್ನು ರಕ್ಷಿಸುವ ತುರ್ತು ಅಗತ್ಯವಿದೆ: ಮಲ್ಲಿಕಾರ್ಜುನ ಖರ್ಗೆ 

0

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಸಮರ್ಥಿಸುವ, ಸಂರಕ್ಷಿಸುವ ಮತ್ತು ಅವರ ಅತ್ಯುತ್ತಮ ಕೊಡುಗೆಯಾದ ಭಾರತದ ಸಂವಿಧಾನವನ್ನು ರಕ್ಷಿಸುವ ತುರ್ತು ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Join Our Whatsapp Group

ಬಾಬಾಸಾಹೇಬ್ ಡಾ.ಬಿ.ಆರ್‌. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಕಟ್ಟಾ ಪ್ರತಿಪಾದಕರಾಗಿದ್ದ ಅಂಬೇಡ್ಕರ್ ಅವರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಖರ್ಗೆ ತಿಳಿಸಿದ್ದಾರೆ.

ಅಂಬೇಡ್ಕರ್ ಅವರು ತಮ್ಮ ಇಡೀ ಜೀವನವನ್ನು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸಲು ಮುಡಿಪಾಗಿಟ್ಟಿದ್ದರು ಎಂದು ಹೇಳಿದ್ದಾರೆ.

ಬಿ.ಆರ್. ಅಂಬೇಡ್ಕರ್ ಅವರ ಪುಣ್ಯತಿಥಿಯ ದಿನವನ್ನು ‘ಮಹಾಪರಿನಿರ್ವಾಣ ದಿವಸ’ ಎಂದು ಆಚರಿಸಲಾಗುತ್ತದೆ. ಈ ದಿನದಂದು ದೀನದಲಿತರ ಹಕ್ಕುಗಳ ಪರ ನಿಂತ, ಭಾರತದ ಸಾಮಾಜಿಕ ರಚನೆಯನ್ನು ಪರಿವರ್ತಿಸಿದ ಸಂವಿಧಾನವನ್ನು ದೇಶಕ್ಕೆ ನೀಡಿದ ನಾಯಕರ ಪರಂಪರೆಯನ್ನು ಗೌರವಿಸಲಾಗುತ್ತದೆ.