ಮನೆ ರಾಷ್ಟ್ರೀಯ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಯ ಬಂಧನ

ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಯ ಬಂಧನ

0

ಮಧ್ಯಪ್ರದೇಶ: ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಕಾರ್ಯಕರ್ತ ಎನ್ನಲಾದ ವ್ಯಕ್ತಿಯನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಪರ್ವೇಶ್ ಶುಕ್ಲ ಎಂಬಾತ ಬಂಧಿತ ಆರೋಪಿ.

ಘಟನೆ ಕುರಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಧ್ಯಪ್ರದೇಶದ ಪೊಲೀಸರು ಆತನನ್ನು ಬಂಧಿಸಿ ಮೊಕದ್ದಮೆ ದಾಖಲಿಸಿದ್ದಾರೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪರ್ವೇಶ್ ಬಿಜೆಪಿ ಕಾರ್ಯಕರ್ತ ಎಂದು ವರದಿಯಾಗಿದೆ.                   

ಪರ್ವೇಶ್ ಶುಕ್ಲಾ ಎಂಬಾತ ಸಿಗರೇಟ್ ಸೇದುತ್ತಾ ಆದಿವಾಸಿ ವ್ಯಕ್ತಿ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಇದನ್ನು ವಿಡಿಯೋ ಮಾಡಿದವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದರು.

ಈ ಕುರಿತು ಟೀಕೆಗಳು ವ್ಯಕ್ತವಾಗಿ ಆತನ ಬಂಧನಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಸಿಧಿ ಜಿಲ್ಲೆಯ ಪೊಲೀಸರು ಆರೋಪಿ ಪರ್ವೇಶ್ ಶುಕ್ಲ ಮೇಲೆ ಆ ರಾಷ್ಟ್ರೀಯ ಭದ್ರತಾ ಕಾಯ್ದೆ ಹಾಗೂ ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆ ಅಡಿ ಮುದ್ದಮೆ ದಾಖಲಿಸಿದ್ದರು.

ಹಿಂದಿನ ಲೇಖನಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ
ಮುಂದಿನ ಲೇಖನಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ ಫೋನ್