ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಕಳೆದ ನವೆಂಬರ್ನಲ್ಲಿ ನ್ಯೂಯಾರ್ಕ್’ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಮುಂದೂಡಿದೆ.
ಜಾಮೀನು ಅರ್ಜಿಯ ಪ್ರತಿಯನ್ನು ತನಗೆ ನೀಡಿಲ್ಲಎಂದು ದೂರುದಾರರ ಪರ ವಾದ ಮಂಡಿಸಿದ ವಕೀಲ ಅಂಕುರ್ ಮಹೀಂದ್ರೋ ಹೇಳಿದ ಬಳಿಕ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಜ್ಯೋತ್ ಸಿಂಗ್ ಭಲ್ಲಾ ಅವರು ಪ್ರಕರಣವನ್ನು ಜನವರಿ 30 ಸೋಮವಾರಕ್ಕೆ ಮುಂದೂಡಿದರು. ಇದೇ ವೇಳೆ ತನಿಖಾಧಿಕಾರಿ ವಿಚಾರಣೆಗೆ ಹಾಜರಾಗಿಲ್ಲ ಎಂಬ ವಿಚಾರವನ್ನು ನ್ಯಾಯಾಲಯ ಗಮನಿಸಿತು.
ಆದರೆ ಆರೋಪಿ ಮಿಶ್ರಾ ಪರ ವಾದ ಮಂಡಿಸಿದ ಹಿರಿಯ ವಕೀಲ ರಮೇಶ್ ಗುಪ್ತಾ ವಿಚಾರಣೆ ಮುಂದೂಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ನ್ಯಾಯಾಲಯಕ್ಕೆ ಪ್ರಕರಣ ಮುಂದೂಡುವತ್ತ ಒಲವು ಇದ್ದರೆ ದಯವಿಟ್ಟು ಮಧ್ಯಂತರ ಜಾಮೀನು ನೀಡಬೇಕು. ಇದು ನ್ಯಾಯಸಮ್ಮತವಲ್ಲ… ತನಿಖಾಧಿಕಾರಿ ಹಾಜರಿಲ್ಲ ಎನ್ನುವುದು ಪ್ರಕರಣ ಮುಂದೂಡುವುದಕ್ಕೆ ಕಾರಣವಾಗಬಾರದು ಎಂದು ಮಿಶ್ರಾ ಪರ ವಕೀಲರು ವಾದಿಸಿದರು. ವಾದಗಳನ್ನು ಆಲಿಸಿದ ನ್ಯಾಯಾಲಯ ಬರುವ ಸೋಮವಾರ ವಿಚಾರಣೆ ನಡೆಸುವುದಾಗಿ ತಿಳಿಸಿತು.
ಮೆಟ್ರೊಪಾಲಿಟನ್ ನ್ಯಾಯಾಲಯವು ಆರೋಪಿ ಮಿಶ್ರಾಗೆ ಜನವರಿ 11ರಂದು ಜಾಮೀನು ನಿರಾಕರಿಸಿತ್ತು. ಆರೋಪಿಯು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.