ಕಲಬುರಗಿ: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಎಲ್ಲ ಪ್ರಕರಣಗಳಲ್ಲಿ ನೆಲದ ಕಾನೂನು ಬಳಕೆ ಮಾಡಲಾಗುವುದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಪ್ರಾಣಿಗಳನ್ನು ಹತ್ಯೆ ಮಾಡಿ ಅವುಗಳ ಹಲ್ಲು, ಚರ್ಮ, ಕೊಂಬು ಹಾಗೂ ಇತರೆ ಅಂಗಗಳ ಬಳಕೆ ಮಾಡಿರುವುದು ಬಯಲಾಗಿ ಶಿಕ್ಷೆಗೆ ಒಳಗಾಗಿದ್ದಾರೆ. ಈಗ ರಾಜ್ಯದಲ್ಲೂ ನಡೆಯುತ್ತಿರುವ ವಿದ್ಯಾಮಾನಗಳಲ್ಲಿ ಹುಲಿ ಉಗುರು ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ಬಂಧನಗಳಾಗಿವೆ. ತಪ್ಪಿತಸ್ಥರ ವಿರುದ್ಧ ನೆಲದ ಕಾನೂನಿನಂತೆ ಕ್ರಮ ಜರುಗುಸಲಾಗುವುದು ಎಂದರು.
ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಹಾಗೂ ವಿನಯ ಗುರೂಜಿ ಸಾರ್ವಜನಿಕವಾಗಿ ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕುರಿತು ಕ್ರಮ ಜರುಗಿಸಲು ಅಧಿಕಾರಿಗಳು ಬದ್ಧರಾಗಿದ್ದಾರೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ದೂರು ನೀಡಿದರೆ, ನೆಲದ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.
ಪ್ರಾಣಿಜನ್ಯ ವಸ್ತುಗಳ ಬಳಕೆ ಸಂಗ್ರಹ, ಸಾಗಾಟ ಮೊದಲಿನಿಂದಲೂ ನಿಷೇಧ ಮಾಡಲಾಗಿದೆ. ಈ ಅಪರಾಧಕ್ಕೆ ಏಳು ವರ್ಷದ ಶಿಕ್ಷೆಯೂ ಇದೆ ಎಂದರು.
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಮೋದಿ ಇದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.