ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ವಿಕಲಚೇತನರಿಗೆ ಶೇ. 05 ರಷ್ಟು ಸಿಗುವಂತಹ ಯಾವುದೇ ರೀತಿಯ ಅನುದಾನವನ್ನು ಕೂಡ ಅವರ ಕೆಲಸಗಳಿಗಾಗಿಯೇ ಬಳಕೆ ಮಾಡಬೇಕು ಹಾಗೂ ಎಲ್ಲಾ ವಿಕಲಚೇತನರು ಕೂಡ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿಕಲಚೇತನರಿಗಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ದಸರಾ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಗಾನಮಂಟಪದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾನು ಪ್ರೀತಿಯಿಂದ ಇಷ್ಟಪಟ್ಟು ಭಾಗವಹಿಸುವಂತಹ ಕಾರ್ಯಕ್ರಮದಲ್ಲಿ ಈ ವಿಕಲಚೇತನರಿಗೆ ಸಂಬಂಧಪಟ್ಟ ಕಾರ್ಯಕ್ರಮಗಳು ಒಂದು, ಈ ಬಾರಿ ಚುನಾವಣಾ ಆಯೋಗದಲ್ಲಿ ವಿಕಲಚೇತನರಿಗೆ ಸಾಲಿನಲ್ಲಿ ನಿಲ್ಲುವ ಪ್ರಕ್ರಿಯೆ ಇರುವುದಿಲ್ಲ. ನೇರವಾಗಿ ಹೋಗಿ ಮತದಾನ ಮಾಡುವ ಪ್ರಕ್ರಿಯೆ ಇರುತ್ತದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳಾದ ಮಂಜುನಾಥ್ ಸ್ವಾಮಿ ಅವರು ಕೆಲವು ದಿನಗಳ ಹಿಂದೆ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮದಲ್ಲಿ ವಿಕಲಚೇತನ ಮಕ್ಕಳು ಭಾಗವಹಿಸಿ ನಮ್ಮಲ್ಲಿ ಯಾವುದೇ ರೀತಿಯ ಕೊರತೆ ಇಲ್ಲ ಅನ್ನುವುದನ್ನು ಆಟ ಆಡುವುದರ ಮೂಲಕ ತೋರಿಸಿ ಕೊಟ್ಟಿದ್ದರು ಎಂದು ತಿಳಿಸಿದರು.
ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್ ಗೌಡ ಅವರು ಮಾತನಾಡಿ ಯಾರು ಸಹ ಯಾರಿಗೂ ಕಡಿಮೆ ಇಲ್ಲ. ನಾವು ಸಹ ನಿಮಗೆ ಸರಿಸಮಾನರು ಎಂಬ ಕಾರ್ಯಕ್ರಮ ವಿಶ್ವದ ಎಲ್ಲೆಡೆ ನಡೆಯುತ್ತಿದೆ ಎಂದು ತಿಳಿಸಿದ ಅವರು ವಿಕಲ ಚೇತನ ಮಕ್ಕಳು ಯಾವುದಕ್ಕೂ ಕೂಡ ಕಡಿಮೆ ಇಲ್ಲ ಎಲ್ಲಾ ರೀತಿಯ ಪ್ರತಿಭೆ ನಿಮ್ಮಲ್ಲಿದೆ ನೀವು ಸಾಧಿಸುತ್ತೀರಾ ಎಂದು ತಿಳಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಆರ್.ಮಾಲಿನಿ, ಸುಬೇಧರ್ ಭಗತ್ಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. .