ಮನೆ ರಾಷ್ಟ್ರೀಯ ರಾಜಕೀಯ ಪ್ರಚಾರಕ್ಕಾಗಿ ದೇಶಪ್ರೇಮಿಗಳ ಹೆಸರು ಬಳಸುವುದು ತಪ್ಪು: ರಂಜಿತ್‌ ಸಾವರ್ಕರ್‌

ರಾಜಕೀಯ ಪ್ರಚಾರಕ್ಕಾಗಿ ದೇಶಪ್ರೇಮಿಗಳ ಹೆಸರು ಬಳಸುವುದು ತಪ್ಪು: ರಂಜಿತ್‌ ಸಾವರ್ಕರ್‌

0

ನವದೆಹಲಿ: ರಾಜಕೀಯ ಪ್ರಚಾರಕ್ಕಾಗಿ ದೇಶಪ್ರೇಮಿಗಳ ಹೆಸರುಗಳನ್ನು ಬಳಸುವುದು ತಪ್ಪು ಮತ್ತು ಶೋಚನೀಯ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ನನ್ನ ಹೆಸರು ಸಾವರ್ಕರ್‌ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್‌ ಅವರ ಮೊಮ್ಮಗ ರಂಜಿತ್‌ ಸಾವರ್ಕರ್‌ ಕಿಡಿಕಾರಿದ್ದಾರೆ.

ತಮ್ಮ ತಾತ ಬ್ರಿಟೀಷರ ಬಳಿ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.

ರಾಹುಲ್‌ ಗಾಂಧಿಯವರು ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವ ಕಳೆದುಕೊಂಡ ಬಳಿಕ ನಡೆಸಿದ್ದ ಮೊದಲ ಸುದ್ದಿಗೋಷ್ಠಿಯಲ್ಲಿ, ಸಾವರ್ಕರ್‌ ಹೆಸರು ಉಲ್ಲೇಖಿಸಿ ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಾವರ್ಕರ್‌ ಮೊಮ್ಮಗ ರಂಜಿತ್‌ ಸಾವರ್ಕರ್‌, ಕ್ಷಮೆ ಕೇಳಲು ನಾನೇನು ಸಾವರ್ಕರ್‌ ಅಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಸಾವರ್ಕರ್‌ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡುವ ದಾಖಲೆಗಳನ್ನು ತೋರಿಸುವಂತೆ ಅವರಿಗೆ ಸವಾಲು ಹಾಕುತ್ತೇನೆ ಎಂದಿದ್ದಾರೆ.

ಹಿಂದಿನ ಲೇಖನಸಕ್ಷಮ ಪ್ರಾಧಿಕಾರ ಆರು ತಿಂಗಳಲ್ಲಿ ತೀರ್ಮಾನಿಸದಿದ್ದರೆ ಅದು ಭ್ರಷ್ಟಾಚಾರ ಆರೋಪವಾದರೂ ರದ್ದು: ಹೈಕೋರ್ಟ್
ಮುಂದಿನ ಲೇಖನಪತಿಗೆ ಜೈಲಾದರೂ ಮಾದಕ ವಸ್ತು ಮಾರಾಟ ದಂಧೆ ಮುಂದುವರೆಸಿದ ಪತ್ನಿ ಬಂಧನ