ಮನೆ ಸುದ್ದಿ ಜಾಲ ಮೈಸೂರಿಗೆ ಆಗಮಿಸಿದ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್‌ ಪಟೇಲ್

ಮೈಸೂರಿಗೆ ಆಗಮಿಸಿದ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್‌ ಪಟೇಲ್

0

ಮೈಸೂರು (Mysuru)-ಸಾಂಸ್ಕೃತಿಕ ನಗರಿ ಮೈಸೂರಿಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್‌ ಪಟೇಲ್ (Anandi Ben Patel) ಆಗಮಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆನಂದಿ ಬೆನ್‌ ಪಟೇಲ್ ಅವರನ್ನು ಸಂಸದ ಪ್ರತಾಪ್‌ ಸಿಂಹ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಸಚ್ಚಿದಾನಂದ ಶ್ರೀಗಳ 80ನೇ ವರ್ಧಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದರು.

ನಗರದ ಸಚ್ಚಿದಾನಂದ ಆಶ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರು ನಂಜನಗೂಡು ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿತ್ತು.

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ ಸಚ್ಚಿದಾನಂದ ಶ್ರೀಗಳ 80ನೇ ವರ್ಧಂತ್ಯೋತ್ಸವ ಕಾರ್ಯಕ್ರಮದಲ್ಲಿ ಆನಂದಿ ಬೆನ್‌ ಪಟೇಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾಗವಹಿಸಿ  ಸಚ್ಚಿದಾನಂದ ಶ್ರೀಗಳಿಗೆ ಶುಭಕೋರಿದರು.

ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಆನಂದಿ ಬೆನ್‌ ಪಟೇಲ್ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.  

ಹಿಂದಿನ ಲೇಖನಬಾರ್‌, ಲಾಡ್ಜ್‌ ತೆರೆಯದಂತೆ ಒತ್ತಾಯಿಸಿ ಪ್ರತಿಭಟನೆ
ಮುಂದಿನ ಲೇಖನಯುಪಿಎಸ್‌ಸಿ ಪರೀಕ್ಷೆ: ಅಂಧತ್ವದ ನಡುವೆಯೇ 425ನೇ ರ‍್ಯಾಂಕ್‌ ಪಡೆದ ಪಿರಿಯಾಪಟ್ಟಣದ ಕೆ.ಟಿ.ಮೇಘನಾ