ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ವಾದಿರಾಜ ಗುರುಸಾರ್ವಭೌಮರ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು. ಮಠದ ರಥಬೀದಿಯಲ್ಲಿ ಶ್ರೀ ಸೋದೆ ವಾದಿರಾಜರ ಕೃತಿಗಳು ಹಾಗೂ ಗ್ರಂಥಗಳನ್ನು ರಥದಲ್ಲಿಟ್ಟು ವಿಶೇಷ ಪೂಜೆ ಮಾಡಿ ಮೆರವಣಿಗೆ ನಡೆಸಲಾಯ್ತು. ರಥಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡರು.
ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಧಾರ್ಮಿಕ ಪ್ರವಚನ ರಾಜಾಂಗಣದಲ್ಲಿ ನೆರವೇರಿತು. ರಾಜಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಸಿ ವಿವಿಧ ಉಪನ್ಯಾಸಗಳನ್ನು ನೀಡಲಾಯಿತು.















