ಮನೆ ರಾಜಕೀಯ ವರುಣ: ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ

ವರುಣ: ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ

0

ಮೈಸೂರು: ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು.

Join Our Whatsapp Group

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಪ್ರತಾಪ ಸಿಂಹ ಸಾಥ್ ನೀಡಿದರು.ಇದಕ್ಕೂ ಮುನ್ನ ಮೆರವಣಿಗೆ, ಶಕ್ತಿ ಪ್ರದರ್ಶನ ನಡೆಯಿತು.

ಬಹಿರಂಗ ಸಭೆಯಲ್ಲಿ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ. ಆ ಪಕ್ಷ ಆಡಳಿತದಲ್ಲಿದ್ದಾಗ ಶೇ 100ರಷ್ಟು ಕಮಿಷನ್ ವ್ಯವಹಾರ ನಡೆಯುತ್ತಿತ್ತು. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ತುಂಬಿ ತುಳುಕುತ್ತಿತ್ತು. ಈಗ ಕಾಂಗ್ರೆಸ್‌ ನವರು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಿಂದಿನ ಲೇಖನಸುಪ್ರೀಂ ಕೋರ್ಟ್ ‘ಜಮಾದಾರ್’ ಹುದ್ದೆ ‘ಮೇಲ್ವಿಚಾರಕ’ ಎಂದು ಬದಲು: ನಿಯಮಾವಳಿಗೆ ಸಿಜೆಐ ಚಂದ್ರಚೂಡ್ ತಿದ್ದುಪಡಿ
ಮುಂದಿನ ಲೇಖನಚಾಮರಾಜ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಎಲ್.ನಾಗೇಂದ್ರ ನಾಮಪತ್ರ ಸಲ್ಲಿಕೆ