ಮನೆ ಮನರಂಜನೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ನಟನೆಯ ‘ಯದಾ ಯದಾ ಹೀ’ ಚಿತ್ರ ಜೂನ್ 2ರಂದು ರಿಲೀಸ್

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ನಟನೆಯ ‘ಯದಾ ಯದಾ ಹೀ’ ಚಿತ್ರ ಜೂನ್ 2ರಂದು ರಿಲೀಸ್

0

ಮದುವೆಯಾದ ನಂತರ ಇದೇ ಮೊದಲ ಬಾರಿಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ತೆರೆಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವ “ಯದಾ ಯದಾ ಹೀ’ ಚಿತ್ರವೂ ಜೂನ್‌ 2ರಂದು ಈ ಚಿತ್ರ ರಾಜ್ಯಾದ್ಯಂತ ತೆರೆಕಾಣುತ್ತಿದೆ.

Join Our Whatsapp Group

ಜಾಕ್‌ ಮಂಜು ಅವರು ಚಿತ್ರವನ್ನು ರಿಲೀಸ್‌ ಮಾಡುತ್ತಿದ್ದಾರೆ. ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಇತ್ತೀಚೆಗಷ್ಟೇ ಈ ಚಿತ್ರದ ಟೈಟಲ್‌ ಸಾಂಗನ್ನು ಕಿಚ್ಚ ಸುದೀಪ್‌ ಅವರು ಬಿಡುಗಡೆ ಮಾಡಿದ್ದರು. ಈ ಗೀತೆಗೆ ವಸಿಷ್ಠಸಿಂಹ ಹಾಗೂ ಹರಿಪ್ರಿಯ ದನಿಯಾಗಿದ್ದಾರೆ. ತೆಲುಗು ವರ್ಷನ್ನಲ್ಲಿ ನಟಿ ರೆಜಿನಾ ಅವರು ನಿರ್ವಹಿಸಿದ್ದ ಪಾತ್ರವನ್ನು, ಇಲ್ಲಿ ಹರಿಪ್ರಿಯಾ ಅವರು ಮಾಡಿದ್ದಾರೆ. ಹಿರಿಯ ನಟ ಅವಿನಾಶ್‌ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ದಿಗಂತ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ.

ತೆಲುಗು ಮೂಲದ ಅಶೋಕ ತೇಜ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಈಗಾಗಲೇ ತೆಲುಗಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರೂ, ಕನ್ನಡದಲ್ಲಿ ಇದು ಮೊದಲ ಸಿನಿಮಾ.

ಇನ್ನು ಈ ಚಿತ್ರಕ್ಕೆ ಗೈಸ್‌ ಅಂಡ್‌ ಡಾಲ್ಸ್ ಕ್ರಿಯೇಶನ್ಸ್‌ ಮೂಲಕ ಹೈದರಾಬಾದ್‌ ಮೂಲದ ರಾಜೇಶ್‌ ಅಗರವಾಲ್‌ ಅವರು ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಕೇರಳದ ಮುನ್ನಾರ್‌, ಚಿಕ್ಕಮಗಳೂರು, ಹೈದರಾಬಾದ್‌ ಹಾಗೂ ಬೆಂಗಳೂರು ಸುತ್ತಮುತ್ತ ಸುಮಾರು 55 ದಿನಗಳ ಕಾಲ ಚಿತ್ರೀಕರಿಸಲಾಗಿದೆ.

ಈ ವೇಳೆ ಮಾತನಾಡಿದ ದಿಗಂತ್‌, ನಾವೆಲ್ಲಾ ಸಿನಿಮಾ ನೋಡಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಈ ಚಿತ್ರದ ನಿರ್ಮಾಪಕ, ನಿರ್ದೇಶಕರು ತೆಲುಗಿನವರು. ಆದರೆ, ಕನ್ನಡದ ಮೇಲಿನ ಪ್ರೀತಿಯಿಂದ ಇಲ್ಲಿ ಬಂದು ಸಿನಿಮಾ ಮಾಡಿದ್ದಾರೆ. ಇದೊಂದು ಸದಭಿರುಚಿಯ ಸಿನಿಮಾವಾಗಿ ಇಷ್ಟವಾಗುತ್ತದೆ. ನಾನಿಲ್ಲಿ ಖಡಕ್‌ ಪೊಲೀಸ್‌ ಆಫೀಸರ್‌ ಆಗಿ ನಟಿಸಿದ್ದೇನೆ. ಮೊದಲ ಬಾರಿಗೆ ಈ ತರಹದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ನೆ’ ಎಂದರು.

ನಂತರ ವಸಿಷ್ಠ ಸಿಂಹ ಮಾತನಾಡಿ, “ನಿರ್ದೇಶಕ ಅಶೋಕ್‌ ತೇಜ ಅವರು ಬಂದು ನನಗೆ ಈ ಕಥೆಯನ್ನು ಹೇಳಿದಾಗ ತುಂಬಾ ಇಂಟರೆಸ್ಟಿಂಗ್‌ ಅನಿಸಿತು. ತೆಲುಗಿನ ಯವುಡು ಕಾದಂಬರಿ ಆಧಾರಿತ ಚಿತ್ರ. ಒಂದೊಳ್ಳೆಯ ಜರ್ನಿ ಕಥೆ ಇದರಲ್ಲಿದೆ. ಟೈಟಲ್‌ ಹಾಡಿಗೆ ನಾಗಾರ್ಜುನ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಸಿನಿಮಾದಲ್ಲಿನ ಪಾತ್ರಗಳು, ಅವುಗಳ ತೊಳಲಾಟಗಳನ್ನು ಹೇಳುವ ಸಾಹಿತ್ಯವಿದು. ಈಗಾಗಲೇ ಚಿತ್ರವನ್ನು ನೋಡಿದ್ದು, ಖುಷಿಯಾಗಿದ್ದೇವೆ. ಇದರಲ್ಲಿ ಪ್ರೀತಿ, ಮೋಸ, ದ್ವೇಷ ಎಲ್ಲವೂ ಇದೆ’ ಎಂದು ಹೇಳಿದರು,

ನಾಯಕಿ ಹರಿಪ್ರಿಯಾ ಮಾತನಾಡಿ, “ಈ ಕಥೆ ಕೇಳಿದಾಗಲೇ ನನಗೆ ತುಂಬಾ ಇಷ್ಟವಾಗಿತ್ತು. ಸಿನಿಮಾ ನೋಡಿ ಮತ್ತಷ್ಟು ಖುಷಿ ಕೊಟ್ಟಿತು. ನಾನು ವಸಿಷ್ಠ, ದಿಗಂತ್‌ ಮೂರೂ ಜನ ಸ್ಪರ್ಧೆಗೆ ಬಿದ್ದವರಂತೆ ನಟಿಸಿದ್ದೇವೆ. ನನ್ನದು ಅಭಿನಯಕ್ಕೆ ಹೆಚ್ಚು ಅವಕಾಶ ಇರುವಂಥ ಪಾತ್ರ. ತುಂಬಾ ಚಾಲೆಂಜಿಂಗ್‌ ಕೂಡ ಆಗಿತ್ತು. ಸಿನಿಮಾನೂ ಕ್ಲಾಸ್‌ ಆಗಿ ಮೂಡಿಬಂದಿದ್ದು, ಪ್ರೇಕ್ಷಕರಿಗೆ ಕುತೂಹಲ ಕೆರಳಿಸುತ್ತಾ ಹೋಗುತ್ತದೆ’ ಎಂದರು.

ನಿರ್ಮಾಪಕ ರಾಜೇಶ್‌ ಅಗರ್‌ವಾಲ್‌ ಮಾತನಾಡುತ್ತಾ, “ನನ್ನ ನಿರ್ಮಾಣದ ಮೊದಲ ಕನ್ನಡ ಚಿತ್ರವಿದು. ಸಿನಿಮಾ ಮಾಡೋದು ನನ್ನ ಕನಸು. ಮೂಲ ಕಥೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡು ಕನ್ನಡ ನೇಟಿವಿಟಿಗೆ ತಕ್ಕಂತೆ ಚಿತ್ರ ಮಾಡಿದ್ದೇವೆ. ದೊಡ್ಡ ಬಜೆಟ್‌ನಲ್ಲಿ ಒಳ್ಳೆಯ ಸಿನಿಮಾ ನಿರ್ಮಿಸಿದ್ದೇವೆ’ ಎಂದರು.

ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿಯಾಗಿದೆ. ಚಿತ್ರದಲ್ಲಿ ಒಟ್ಟು 3 ಹಾಡುಗಳಿದ್ದು, ಶ್ರೀಚರಣ್‌ ಪಾಕಾಲ ಅವರ ಸಂಗೀತ ನಿರ್ದೇಶನವಿದೆ.

ಹಿಂದಿನ ಲೇಖನಅಮೃತಸರದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್’ನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಮುಂದಿನ ಲೇಖನಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಪಡೆಯುತ್ತಿದ್ದ ಪಶುವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ