ವಿಜಯನಗರ: ಇನ್ನೆರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ.
ಐಶ್ವರ್ಯ ಮೃತಪಟ್ಟ ಯುವತಿ.
ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
ಅಶೋಕ ಮತ್ತು ಐಶ್ವರ್ಯಾ ಆರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇಬ್ಬರು ಬೇರೆ ಬೇರೆ ಜಾತಿಯಾದ್ದರಿಂದ ಮನೆಯವರ ಒಪ್ಪಿಗೆ ಮೇರೆಗೆ ಅಂತರ್ಜಾತಿ ವಿವಾಹವಾಗಲು ರೆಡಿಯಾಗಿದ್ದರು. ಅಂತಾರ್ಜಾತಿ ಹಿನ್ನಲೆಯಲ್ಲಿ ಕೆಲವು ಷರತ್ತುಗಳ ಮೇಲೆ ಮದುವೆ ಮಾಡಿಕೊಡಲು ಯುವಕನ ಕಡೆಯವರು ಒಪ್ಪಿದ್ದರು.
ನಮ್ಮ ಸಂಪ್ರದಾಯದಂತೆ ಮದುವೆ ಮಾಡಿಕೊಳ್ಳುತ್ತೇವೆ, ಇದೀಗ ಶಾಸ್ತ್ರ ಇದೆ ಎಂದು ಹೇಳಿ ಐಶ್ವರ್ಯಾಳನ್ನು ಹುಡುಗನ ಕಡೆಯವರು ಕರೆದುಕೊಂಡು ಹೋಗಿದ್ದರು. ಅಲ್ಲದೆ, ಹುಡುಗಿ ಕಡೆಯವರು ಯಾರೂ ಬರಬಾರದೆಂದು ಷರತ್ತು ಕೂಡ ಹಾಕಿದ್ದರಂತೆ. ಇದೀಗ ದಿಢೀರನೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕತೆ ಕಟ್ಟುತ್ತಿದ್ದಾರೆ ಎಂದು ಯುವತಿ ಕಡೆಯವರು ಗಂಭೀರ ಆರೋಪ ಮಾಡಿದ್ದಾರೆ.
ನಮಗೂ ಅವರಿಗೂ ಹೊಂದಾಣಿಕೆ ಆಗಲ್ಲ, ನಾನು ಈ ಮದುವೆ ಬೇಡ ಎಂದು ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ ಮನಸ್ಸಿನವಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಯುವಕನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.
ಹೊಸಪೇಟೆಯ ಟಿಬಿ ಡ್ಯಾಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.