ವಿಜಯಪುರ: ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ದಂಪತಿ ನೇಣಿಗೆ ಶರಣಾಗಿರುವ ದುರಂತ ಘಟನೆ ನಗರದಲ್ಲಿ ಜರುಗಿದೆ.
ನಗರದ ಸಿದ್ಧೇಶ್ವರ ಬಡಾವಣೆಯ ಮನೆಯಲ್ಲಿ ಮಂಗಳವಾರ ರಾತ್ರಿ ಮನೋಜಕುಮಾರ ಪೋಳ (30) ಹಾಗೂ ರಾಖಿ (23) ಎಂಬವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ.
ಮನೋಜ್ ಹಾಗೂ ರಾಖಿ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮನೋಜ ತಾಯಿ ಭಾರತಿ ತಮ್ಮ ಮಗಳ ಊರಿಗೆ ಹೋಗಿದ್ದರು. ಮಂಗಳವಾರ ರಾತ್ರಿ ಊಟ ಮಾಡಿದ ಬಳಿಕ ನವದಂಪತಿ ಸೀರೆಯಿಂದ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಬುಧವಾರ ಬೆಳಗ್ಗೆ ಭಾರತಿ ಮನೆಗೆ ಬಂದಾಗ ಮಗ-ಸೊಸೆ ಇಬ್ವರೂ ನೇಣಿಗೆ ಶರಣಾದ ಘಟನೆ ಕಂಡು ಕಂಗಾಲಾಗಿದ್ದಾರೆ. ನವದಂಪತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸುದ್ದಿ ತಿಳಿದ ಜಲನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.