ಮನೆ ರಾಜಕೀಯ ಬಿಬಿಎಂಪಿ ಚುನಾವಣೆಗೆ ನಾವು ಸಿದ್ದ: ಸಿಎಂ ಬೊಮ್ಮಾಯಿ

ಬಿಬಿಎಂಪಿ ಚುನಾವಣೆಗೆ ನಾವು ಸಿದ್ದ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.  ಸುಪ್ರೀಂ ಆದೇಶವನ್ನ ಸ್ವಾಗತಸುತ್ತೇವೆ. ಬಿಬಿಎಂಪಿ ಚುನಾವಣೆಗೆ ನಾವು ಸರ್ವ ಸನ್ನದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೆಶನ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಬಿಬಿಎಂಪಿ ಚುನಾವಣೆ ನಡೆಸಲು ಸಿದ್ಧರಿದ್ದೇವೆ ಎಂದಿದ್ದಾರೆ.

ಮೀಸಲಾತಿ ಪರಿಶೀಲನೆಗೆ ಸುಪ್ರೀಂಕೋರ್ಟ್ ಸಹಮತ ನೀಡಿದ್ದು,  ನಾವು ಸಹ  ತಜ್ಞರ ಸಮಿತಿ ರಚನೆ ಮಾಡುತ್ತೇವೆ. ಒಬಿಸಿಗೆ ಮೀಸಲಾತಿ ಕೊಡಬೇಕೆಂದು ನಮ್ಮ ಆಶಯ. ಸುಪ್ರೀಂಕೋರ್ಟ್ ಆದೇಶದಿಂದ ಸಮಾಧಾನವಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಹಿಂದಿನ ಲೇಖನಹೈದರಾಬಾದ್ ಎನ್‌ಕೌಂಟರ್ ಉದ್ದೇಶಪೂರ್ವಕ: ಸುಪ್ರೀಂ ಕೋರ್ಟ್ ನೇಮಿಸಿದ ಆಯೋಗದ ವರದಿ
ಮುಂದಿನ ಲೇಖನಬಿಬಿಎಂಪಿ ಚುನುವಾಣೆಯಲ್ಲಿ ನಾವೇ ಗೆಲ್ಲುತ್ತೇವೆ: ಸಚಿವ ಆರ್.ಅಶೋಕ್