ಮನೆ ರಾಜ್ಯ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ: ಮುರುಘಾ ಶರಣರ ಬಂಧನ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ: ಮುರುಘಾ ಶರಣರ ಬಂಧನ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

0

ಮಂಗಳೂರು(Mangalore): ಪೊಲೀಸರಿಗೆ ಮುಕ್ತವಾಗಿ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಅವರು ಆ ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ಕಾನೂನು ಪ್ರಕಾರವಾಗಿ ನಡೆಯುತ್ತಿದೆ  ಎಂದು ಮುರುಘಾ ಶ್ರೀಗಳ ಬಂಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಎಲ್ಲ ಮಾತುಗಳಿಗೆ ಉತ್ತರ ಕೊಡುವ ಅಗತ್ಯ ಇಲ್ಲ.ಕಾನೂನು ಪ್ರಕಾರವಾಗಿ ಎಲ್ಲವೂ ನಡೆಯಲಿದೆ. ಈ ಸಂದರ್ಭದಲ್ಲಿ ಮಾತನಾಡುವುದು ಹಾಗೂ ವ್ಯಾಖ್ಯಾನಿಸುವುದು ಸರಿಯಲ್ಲ ಎಂದರು.

ಕರಾವಳಿ ಅಭಿವೃದ್ಧಿಗೆ ಶಕ್ತಿ ತುಂಬಲಿರುವ ಪ್ರಧಾನಿ

ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಗಳು ಬಹಳ ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಬರುವಾಗ ಹಲವಾರು ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ. 3800 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆಗಳಾಗಿದ್ದು, ಆರ್ಥಿಕ ಚಟುವಟಿಕೆ ಮತ್ತು ಬಂದರುಗಳ ಸಾಮರ್ಥ್ಯ ಹಾಗೂ ವ್ಯವಹಾರಗಳನ್ನು ಹೆಚ್ಚಿಸುವ ಹಾಗೂ ಉದ್ಯೋಗವನ್ನು ವೃದ್ಧಿಸುವ ಯೋಜನೆಗಳಾಗಿವೆ.

ಕರ್ನಾಟಕಕ್ಕೆ 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಜೂರು ಮಾಡಿದ್ದಾರೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ ಮಾಡಿದ್ದಾರೆ. ರಾಜ್ಯ ಸರ್ಕಾರವೂ ಹಲವಾರು ಯೋಜನೆಗಳನ್ನು ಈ ಭಾಗಕ್ಕೆ ಜಾರಿ ಮಾಡಿದ್ದು ಈ ಎಲ್ಲಾ ಯೋಜನೆಗಳಿಗೆ ಇಂದು ಚಾಲನೆ ದೊರೆಯಲಿದೆ ಎಂದರು.

ಹಿಂದಿನ ಲೇಖನಪ್ರಧಾನಿ ಮೋದಿ ಕಾರ್ಯಕ್ರಮ: ಕಪ್ಪು ಅಂಗಿ ಧರಿಸಿದವರಿಗೆ ಪ್ರವೇಶ ನಿರಾಕರಣೆ
ಮುಂದಿನ ಲೇಖನಮೈಸೂರು:  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಲ್’ಐಸಿ ಪ್ರತಿನಿಧಿಗಳ ಪ್ರತಿಭಟನೆ