ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ನಮ್ಮಲ್ಲಿ ಮುಖ್ಯಮಂತ್ರಿಯಾಗಲಿ ಯಾವುದೇ ಹುದ್ದೆ ಮಾರಾಟಕ್ಕಿಲ್ಲ. ಆದರೆ ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂಬಂತೆ ಟಿಕೆಟ್ಟನ್ನೇ ಮಾರಾಟಕ್ಕಿಟ್ಟ ನಿಮಗೆ ಹಾಗೆ ಕಾಣುವುದು ಸಹಜ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಹುದ್ದೆಯನ್ನೇ ₹ 2000 ಕೋಟಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆಗೆ ಪ್ರತಿಯಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.
ನಿಮ್ಮ ಸರ್ಕಾರ ಖರ್ಚು ಮಾಡಿದ ₹ 35,000 ಕೋಟಿಗೆ ಲೆಕ್ಕವೇ ಇಲ್ಲ ಎಂಬುದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ. ಅದಕ್ಕೆ ಸಿದ್ದರಾಮಯ್ಯ ಅವರು ಇಂದಿಗೂ ಉತ್ತರಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ನಿಮ್ಮ ಟೂಲ್’ಕಿಟ್ ಭಾಗವಾದ ಕಮಿಷನ್ ಎಂಬ ಸುಳ್ಳನ್ನು ಎಷ್ಟು ಬಾರಿ ಕೂಗಿ ಹೇಳಿದರೂ ಅದು ಸತ್ಯವಾಗುವುದಿಲ್ಲ. ಸಾಕ್ಷ್ಯ ಕೊಡಿ ಎಂದು ಪ್ರಧಾನಿ ಕಚೇರಿ ಕೇಳಿದಾಗ ಇರಲಿಲ್ಲ. ನ್ಯಾಯಾಲಯಕ್ಕೂ ಕೊಡಲು ಸಾಕ್ಷ್ಯವಿಲ್ಲದೆ ತಪ್ಪಿಸಿಕೊಂಡು ಓಡಾಡಿದ ಮೇಲೂ ಸುಳ್ಳಿನ ಚಲಾವಣೆಗಿಳಿದ ತಮ್ಮ ಧೈರ್ಯ ಅಪ್ರತಿಮ ಎಂದು ಬಿಜೆಪಿ ಟೀಕಿಸಿದೆ.
ಪೊಲೀಸ್ ಇಲಾಖೆಯ ಆಧುನೀಕರಣದ ಹೆಸರಲ್ಲೇ 68.8 ಕೋಟಿ ರೂ. ಕಳ್ಳತನ ಮಾಡಿದ ತಾವು ಅಮಿತ್ ಶಾ ಭೇಟಿಯಿಂದ ಧೃತಿಗೆಟ್ಟು ಕಮಿಷನ್ ತುತ್ತೂರಿಯನ್ನೇ ಮತ್ತೆ ಊದುತ್ತಿದ್ದೀರಿ. ಅದೇ ಹಳೆ ರಾಗ ಹಾಡುತ್ತಾ ಜನರ ಕಣ್ಣಿಗೆ ಮಣ್ಣೆರಚಲು ಆಗುವುದಿಲ್ಲ ಮಿಸ್ಟರ್ ಸಿದ್ದರಾಮಯ್ಯ ಎಂದಿದೆ.
ಕೆರೆಗಳ ನೀರು ತುಂಬಿಸುತ್ತೇವೆ ಎಂದು ನಿಮ್ಮ ಸರಕಾರ ₹ 1,43,341 ಕೋಟಿ ಬಿಡುಗಡೆ ಮಾಡಿ ಜಾಣ ನಿದ್ರೆಗೆ ಜಾರಿತು. ನಿಮ್ಮ ಸರಕಾರದ ಅವಧಿ ಮುಗಿಯುವ ಕಾಲಕ್ಕೂ ನೀರು ತುಂಬಿಸಲು ಯಾವುದೇ ಕಾಮಗಾರಿ ಆರಂಭ ಮಾಡಲಿಲ್ಲ. ಯೋಜನೆ ಹೆಸರಲ್ಲಿ ನಿಮ್ಮ ಸಹೋದ್ಯೋಗಿಗಳ ಜೇಬು ತುಂಬಿದವು. ಕೊನೆಗೆ ಕೆರೆಗಳು ತುಂಬಿದ್ದು ಮಳೆಯಿಂದ ಎಂದಿದೆ.
ನಿಮ್ಮವರ ಗ್ರಾನೈಟ್ ಗಣಿಗಾರಿಕೆಗೆ 7,785 ಹೆಕ್ಟೇರ್ ಅರಣ್ಯ ಕೊಟ್ಟು, ಇಂದಿರಾ ಕ್ಯಾಂಟೀನ್ ಹೆಸರಲ್ಲಿ ಭ್ರಷ್ಟಾಚಾರ ಬೇಯಿಸಿ ನುಂಗಿದ್ದಕ್ಕೇ ಜನ ಸಿದ್ದರಾಮಯ್ಯರ ಸರ್ಕಾರ ತಿರಸ್ಕರಿಸಿದ್ದು. ಆದರೂ ಅಧಿಕಾರಕ್ಕೆ ಬರಲು ಬೇರೆ ದಾರಿ ಕಂಡುಕೊಂಡಾಗ ಉಪಚುನಾವಣೆಯಲ್ಲೂ ಜನ ನಿಮಗೆ ಪಾಠ ಕಲಿಸಿದ್ದರು ಎಂಬುದು ನೆನಪಿರಲಿ ಎಂದು ಹೇಳಿದೆ.