ಮೈಸೂರು(Mysuru): ಇವತ್ತು ಮಹಿಷಾಸುರ ಇಲ್ಲ, ನಮ್ಮ ಮನಗಳಲ್ಲಿರುವ ದುಷ್ಟ ವಿಚಾರಗಳು ಬದಿಗಿಟ್ಟು ಶಿಷ್ಟ ವಿಚಾರಗಳನ್ನು ಮೈಗೂಡಿಸಿಕೊಂಡು ನಾವು ಬಾಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ರಾಷ್ಟ್ರಪತಿಗಳು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ್ದು ನಮಗೆ ಸಂತಸ ತಂದಿದೆ. ದೇಶದ ಶ್ರೇಯೋಭಿವೃದ್ಧಿಗೆ ಪ್ರಾರ್ಥಿಸಿದ್ದಾರೆ ಎಂದರು.
ಈ ಬಾರಿ ದಸರಾ ಮಹೋತ್ಸವ ಹಲವಾರು ವಿಶೇಷತೆಗಳಿಂದ ಕೂಡಿದೆ. ಗತವೈಭವನ್ನ ನೆನಪು ಮಾಡಿಕೊಳ್ಳುತ್ತಿದ್ದೇವೆ. ನಾಡಿನಲ್ಲಿ ಎಲ್ಲರು ನಾಡಹಬ್ಬವನ್ನ ಆಚರಣೆ ಮಾಡುತ್ತಿದ್ದೇವೆ. ಕಾಲ ಕಾಲಕ್ಕೆ ಆ ದೇವತೆ ಮಳೆ ಬೆಳೆಯನ್ನ ಕೊಟ್ಟು. ಈ ಶಕ್ತಿ ಪೀಠದಿಂದ ನಾಡಿಗೆ ಸುಭೀಕ್ಷೇ ನೀಡುತ್ತಿದ್ದಾಳೆ. ನಮ್ಮ ಗತಕಾಲದ ವೈಭದ ಜೊತೆಗೆ ಇಂದಿನ ಹತ್ತು ಹಲವಾರು ನೈಸರ್ಗಿಕ ಸವಾಲುಗಳನ್ನು ಎದುರಿಸಿದ್ದೇವೆ. ಈ ವೇಳೆ ರಾಷ್ಟ್ರಪತಿಗಳು ಈ ಕಾರ್ಯಕ್ರಮಕ್ಕೆ ಬಂದಿರೋದು ಬಹಳ ಘನೆತೆ ಹೆಚ್ಚಿಸಿದೆ. ರಾಷ್ಟ್ರಪತಿಗಳನ್ನ ದಸರಾ ಮಹೋತ್ಸವಕ್ಕೆ ಆಹ್ವಾನಿಸಿದ ಕೂಡಲೇ ಒಪ್ಪಿಗೆ ಕೊಟ್ಟರು. ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕದ ಮೂಲಕ ರಾಜ್ಯಗಳ ಪ್ರವಾಸ ಮಾಡುತ್ತಿದ್ದೇನೆ ಅಂದರು. ದೇವಿಯು ಹಂಸದ ಮೇಲೆ ಕೂತಿದ್ದಾರೆ. ಅದು ಶಾಂತಿಯ ಸಂಕೇತ, ವಿಚಾರದಲ್ಲಿ ಶುದ್ಧತೆ ಸಂಕೇತವಾಗಿದೆ ಎಂದು ತಿಳಿಸಿದರು.
ಚಾಮುಂಡಿ ತಾಯಿಯ ನೋಡಲು ಎರಡು ಕಣ್ಣು ಸಾಲದು. ಕನ್ನಡ ನಾಡನ್ನ ಎಲ್ಲ ರಂಗದಲ್ಲೂ ಕೂಡ ಸರ್ವ ಶ್ರೇಷ್ಠವಾಗಿ ಕಟ್ಟಲು ಎಲ್ಲರೂ ಪ್ರಯತ್ನ ಮಾಡಬೇಕಾಗಿದೆ. ಅಂತಹ ಸದ್ಬುದ್ಧಿಯನ್ನ ತಾಯಿ ನಮಗೆ ಕೊಡಲಿ ಎಂದು ಬೇಡಿಕೊಳ್ಳುತ್ತೇನೆ. ರಾಷ್ಟ್ರಪತಿಗಳಿಗೆ ಸಮಸ್ತ ಕನ್ನಡಿಗರ ಪರವಾಗಿ ಶುಭಾಶಯಗಳನ್ನ ಕೋರುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.