ಮನೆ ರಾಜ್ಯ ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರು ಹಿಡಿದು ತರುತ್ತೇವೆ: ಸಿಎಂ ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರು ಹಿಡಿದು ತರುತ್ತೇವೆ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರು ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Join Our Whatsapp Group

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್​ ರೇವಣ್ಣ ಅವರ ಪಾಸ್​ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್​ ಪೋರ್ಟ್​ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ‌ಮಾಡುತ್ತಿದೆ ಎಂದು ಆರೋಪಿಸಿದರು.

ಹೆಚ್​ ಡಿ ಕುಮಾರಸ್ವಾಮಿ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಎಂದು ಹೇಳಿದ್ದರು. ನನ್ನ ಮಗ ನಿಖಿಲ್​ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ: ಡಿ ಕೆ ಶಿವಕುಮಾರ್​

ಪ್ರಕರಣದ ತನಿಖೆಗೆ ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ. ಬಿಜೆಪಿಯವರು ಈಗ ಯಾಕೆ ಯಾರು ಮಾತನಾಡುತ್ತಿಲ್ಲ. ಸಿ.ಟಿ.ರವಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸದಾನಂದಗೌಡ, ಆರ್​. ಅಶೋಕ್​​ ಎಲ್ಲಿ ಹೋದರು? ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆಂದು ಹೇಳುತ್ತಾರೆ, ಈಗ ಮಹಿಳೆಯರಿಗೆ ಅನ್ಯಾಯ ಆಗಿದೆ ಯಾಕೆ ಮಾತನಾಡಿಲ್ಲ. ಸಂತ್ರಸ್ತ ಮಹಿಳೆಯರಿಗೆ ಧೈರ್ಯ ಹೇಳುವ ಕೆಲಸ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಅವರ ಸಿಡಿ ಬಿಡಬಹುದು ಎಂಬ ಬಿಜೆಪಿ ಅಭ್ಯರ್ಥಿ ರಾಜುಗೌಡ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ರಾಜುಗೌಡ ಒಬ್ಬ ಮೆಂಟಲ್ ಕೇಸ್ ಎಂದರು.

ಹಿಂದಿನ ಲೇಖನಶೋಕಾಸ್ ನೋಟಿಸ್ ನೀಡದೇ ಕಪ್ಪು ಪಟ್ಟಿಗೆ ಸೇರಿಸಲಾಗದು: ಹೈಕೋರ್ಟ್
ಮುಂದಿನ ಲೇಖನನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ