ಮನೆ ರಾಜ್ಯ ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿಎಂ ಬೊಮ್ಮಾಯಿ

0

ಹಾವೇರಿ: ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Join Our Whatsapp Group

ಬುಧವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಸತತ 15 ವರ್ಷಗಳಿಂದ ಆಶೀರ್ವಾದ ಮಾಡಿದ್ದೀರಿ. ಶಿಗ್ಗಾಂವಿ ಕ್ಷೇತ್ರದ ಜನರ ಪ್ರೀತಿಗೆ ನಾನು ಸೋತಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇನೆ. ನಾನು ಮುಖ್ಯಮಂತ್ರಿ ಆಗಿ ವಿದ್ಯಾರ್ಥಿಗಳು, ರೈತರಿಗಾಗಿ ಯೋಜನೆ ಜಾರಿ ಮಾಡಿದ್ದೇನೆಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೋಹ ಇತ್ತು. ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ. ನಾನು ತೀರಿಕೊಂಡ ಮೇಲೆ ಶಿಗ್ಗಾಂವಿಯಲ್ಲೇ ಮಣ್ಣು ಮಾಡಬೇಕು ಎಂದು ಹೇಳಿದರು.

ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ: ನಟ ಸುದೀಪ್

ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ಮಾತನಾಡಿ, ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವು ಅವರನ್ನು ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.

ಮೊದಲ ಬಾರಿಗೆ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಗೆದ್ದೇ ಗೆಲ್ಲುವೆ ಒಂದು ದಿನ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಎಂದು ಹೇಳಿದರು.

ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಅವಕಾಶ ಸಿಗಲಿದೆ: ಜೆಪಿ ನಡ್ಡಾ

ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಕೇವಲ ಶಾಸಕ ಸ್ಥಾನಕ್ಕಾಗಿ ಅಲ್ಲ. ರಾಜ್ಯವನ್ನು ಹೊಸ ದಿಕ್ಕಿಗೆ ಒಯ್ಯುವ ಕಾರ್ಯ ಆಗಲಿದೆ. ನಿಮ್ಮಲ್ಲಿರುವ ಆತ್ಮ ವಿಶ್ವಾಸ, ಉತ್ಸಾಹ ನೋಡಿದರೇ ಬೊಮ್ಮಾಯಿ ಅವರಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಅವಕಾಶ ಸಿಗಲಿದೆ ಎಂದೆನಿಸುತ್ತಿದೆ ಎಂದು ಹೇಳುವ ಮೂಲಕ ಬೊಮ್ಮಾಯಿಯವರು ಮತ್ತೆ ಸಿಎಂ ಆಗುವ ಸುಳಿವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನೀಡಿದ್ದಾರೆ.

ಹಿಂದಿನ ಲೇಖನಮೈಸೂರು: ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಮುಂದಿನ ಲೇಖನಮೊಮ್ಮಗ ಧವನ್ ರಾಕೇಶ್ ನನ್ನು ಉತ್ತರಾಧಿಕಾರಿಯಾಗಿ ಘೋಷಿಸಿದ ಸಿದ್ದರಾಮಯ್ಯ