ಹಾವೇರಿ: ಯಾವುದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಬಂದರು 28 ಸೀಟ್ ಗೆಲ್ಲುತ್ತೇವೆ, ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿ ಮಾಡುತ್ತೇವೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಹಾವೇರಿಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ಯಾರು, ವಿಪಕ್ಷ ನಾಯಕ ಯಾರು ಎಂದು ಪ್ರಶ್ನೆ ಕೇಳುತ್ತಿದ್ದಾರೆ. ಯಾರಾದರೂ ಆಗುತ್ತಾರೆ. ಲಕ್ಷಾಂತರ ಕಾರ್ಯಕರ್ತರಿದ್ದಾರೆ, ಸಂಘಟನೆಯ ಕೆಲಸ ನಿಂತಿಲ್ಲ. ಕೇಂದ್ರದ ನಾಯಕರು ನಮಗಿಂತ ಬುದ್ದಿವಂತರು. ಯಾವ ಕಾರಣ ನಿಲ್ಲಿಸಿದ್ದಾರೆ ಎನ್ನುವುದನ್ನ ಆಲೋಚನೆ ಮಾಡಿರುತ್ತಾರೆ ಎಂದರು.
ಸೂರ್ಯ ಚಂದ್ರ ಮತ್ತೆ ಮತ್ತೆ ಹುಟ್ಟಿಬಂದರೂ 17 ಜನರನ್ನು ಮತ್ತೆ ಕರೆದುಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಬರ್ರಿ ಕಾಂಗ್ರೆಸ್ ಗೆ ಎಂದು ಈಗ ಎಲ್ಲರ ಮನೆಗೆ ಹೋಗಿ ಕೈಕಾಲು ಹಿಡಿಯುತ್ತಿದ್ದಾರೆ. ಒಬ್ಬರಾದರೂ ಬಂದರಾ? ಇದು ಕಾಂಗ್ರೆಸ್ ಹಣೆ ಬರಹ, ಗ್ಯಾರಂಟಿ ಹೆಸರಲ್ಲಿ ಒಂದು ಸಲ ಮೋಸ ಮಾಡಿದರು. ಮತ್ತೆ ಮತ್ತೆ ಮೋಸ ಮಾಡಲು ಆಗಲ್ಲ. ಕಾಂಗ್ರೆಸ್ ಮೋಸಗಾರರ ಪಕ್ಷವೆಂದು ರಾಜ್ಯದ ಜನತೆಗೆ ಗೊತ್ತಾಗಿದೆ ಎಂದರು.
ಹಾವೇರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ವಾತಾವರಣ ಕೆಡಿಸುವ ಪ್ರಶ್ನೆ ಇಲ್ಲ. ಬಿಜೆಪಿ ಗೆಲ್ಲುತ್ತದೆ, ಕುಳಿತು ಮಾತನಾಡುತ್ತೇವೆ ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.