ತೀರ್ಥಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ, ಒಳ್ಳೆಯ ವಾತಾವರಣ ಇದೆ. ಬಿಜೆಪಿಯವರು ಶ್ರೀಮಂತರ ಪರ ಇದ್ದಾರೆ, ನಾವು ಬಡವರ ಪರ ಇದ್ದೇವೆ. ಖಂಡಿತವಾಗಿ ಈ ಬಾರಿ ಯಶಸ್ವಿಯಾಗುತ್ತೇವೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಪಟ್ಟಣದ ರಥಬೀದಿಯಲ್ಲಿರುವ ಸಮಗೋಡು ಕೋದಂಡರಾಮನ ದೇವಸ್ಥಾನದಲ್ಲಿ ದೇವಸ್ಥಾನದ ಅಭಿವೃದ್ಧಿಗಾಗಿ ಸರ್ಕಾರ 25 ಲಕ್ಷ ಹಣ ಬಿಡುಗಡೆ ಮಾಡಿರುವ ಕಾರಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಶಿವಮೊಗ್ಗದಲ್ಲಿ ಈಶ್ವರಪ್ಪ ಅವರ ಬಂಡಾಯದ ಬಗ್ಗೆ ಈಗಲೇ ಹೇಳಲು ಆಗುವುದಿಲ್ಲ, ಅವರು ನಾಮಪತ್ರ ಸಲ್ಲಿಸಿ ವಾಪಾಸ್ ಪಡೆಯದಿದ್ದಾಗ ಅದರ ಬಗ್ಗೆ ಮಾತನಾಡುತ್ತೇನೆ ಎಂದರು.
ಈ ದೇಶದಲ್ಲಿ ಹಣ ಇದ್ದರೆ ಏನು ಬೇಕಾದರೂ ಮಾಡಬಹುದು. ಈ ಹತ್ತು ವರ್ಷದಲ್ಲಿ ಒಬ್ಬ ಬಿಜೆಪಿಯವನ ಮೇಲೆ ಇ.ಡಿ ಅಥವಾ ಸಿಬಿಐ ಕೇಸ್ ಆಗಿಲ್ಲ. ಅವರೆಲ್ಲಾ ಏನು ಶ್ರೀ ರಾಮನ ವ್ಯಕ್ತಿತ್ವದವರ? ಅವರ ಮನೆಯಲ್ಲಿ ಹಣ, ಬಂಗಾರ, ಬೆಳ್ಳಿ ಇಲ್ಲವೇ? ಅವರೆಲ್ಲಾ ಪರಿಶುದ್ಧರ? ಭಾರತೀಯ ಜನತಾ ಪಾರ್ಟಿ ಎಂದರೆ ಅದೊಂದು ವಾಷಿಂಗ್ ಮೆಷಿನ್ ಎಂದು ವಾಗ್ದಾಳಿ ನಡೆಸಿದರು.
ತೀರ್ಥಹಳ್ಳಿಯಲ್ಲೂ ಬಡವ ಎಂದುಕೊಂಡು ಎಷ್ಟು ರಿಯಲ್ ಎಸ್ಟೇಟ್ ಮಾಡಿದ್ದಾರೆ, ಯಾರೆಲ್ಲರ ಹೆಸರಲ್ಲಿ ಮಾಡುತ್ತಿದ್ದಾರೆ ಎನ್ನುವುದನ್ನು, ತೀರ್ಥಹಳ್ಳಿ ಸುತ್ತಮುತ್ತ ಜಾಗವನ್ನು ಯಾರು ಕಟ್ಟಿಸುತ್ತಿದ್ದಾರೆ ಎಂದು ಕಾಣಿಸುತ್ತಿದೆ. ನಾನು 10 ವರ್ಷ ಶಾಸಕ, ಆದರೆ ಸೈಟ್ ಮಂಜೂರು ಮಾಡಿಸಿಕೊಂಡಿಲ್ಲ. ಜ್ಞಾನೇಂದ್ರ ಅವರು 15 ವರ್ಷದ ಹಿಂದೆ ಸೈಟ್ ಮಂಜೂರು ಮಾಡಿಸಿಕೊಂಡಿದ್ದಾರೆ. 10 ಕೋಟಿ ಮೌಲ್ಯದ್ದು ಬೇಡ 50 ಕೋಟಿ ಮೌಲ್ಯದ ಬದಲಾವಣೆ ಬೇಕು ಎಂದು ಸುಪ್ರೀಂ ಕೋರ್ಟ್ ಗೆ ಹೋಗಿದಕ್ಕೆ ಕಪಾಳಕ್ಕೆ ಹೊಡೆದು ವಾಪಾಸ್ ಕಳುಹಿಸಿದರು ಎಂದು ಆರಗ ವಿರುದ್ಧ ವಾಗ್ದಾಳಿ ನಡೆಸಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.