ಮನೆ ರಾಜಕೀಯ 3 ವರ್ಷದಿಂದ ಬಿಜೆಪಿ ಸರ್ಕಾರ ಏನು ಮಾಡಿಲ್ಲ:  ಸಿದ್ದರಾಮಯ್ಯ ಆರೋಪ

3 ವರ್ಷದಿಂದ ಬಿಜೆಪಿ ಸರ್ಕಾರ ಏನು ಮಾಡಿಲ್ಲ:  ಸಿದ್ದರಾಮಯ್ಯ ಆರೋಪ

0

ಬೆಂಗಳೂರು(Bengaluru): ರಾಜಕಾಲುವೆ ತೆರವಿಗೆ ನಮ್ಮ ಅಧಿಕಾರವಧಿಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಮೂರು ವರ್ಷದಿಂದ  ಏನು ಮಾಡಿಲ್ಲ ಎಂದು ವಿಪಕ್ಷ ನಾಯಕ  ಸಿದ್ಧರಾಮಯ್ಯ ಆರೋಪ ಮಾಡಿದರು.

ಬೆಂಗಳೂರಿನ ಮಳೆಹಾನಿ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ಳಂದೂರು ರಿಂಗ್ ರಸ್ತೆಯ ಎಕೋ ಸ್ಪೇಸ್ ಬಡಾವಣೆ, ಎಪ್ಸಿಲಾನ್ ಲೇ ಔಟ್, ರೈನ್ ಬೋ ಲೇಔಟ್’ನ್ನು ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಅಕ್ರಮ ಮನೆ ಕಟ್ಟಿದವರ ವಿರುದ್ಧ ಕ್ರಮ ಆಗಬೇಕು. ಸಿಎಂ ಹೇಳ್ತಾರೆ ಹಿಂದಿನ ಸರ್ಕಾರ ಕಾರಣ ಎಂದು. ಆದರೆ ಅವರೇನು ಮಾಡಿದ್ದಾರೆ ಎಂದು ಹೇಳಬೇಕಲ್ವಾ ?  ನಾವೇನು ಮಾಡಿದ್ದೇವೆ ಅಂತಾ ಜನರಿಗೆ ಹೇಳಬೇಕಲ್ವಾ ? ಮೂರು ವರ್ಷದಿಂದ ಈ ಸರ್ಕಾರ ಏನು ಮಾಡಿಲ್ಲ. ಹೀಗಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ.  ರಾಜಕಾಲುವೆ ಒತ್ತುವರಿ ಮಾಡಲು ಯಾರು ಕಾರಣ. ಇದನ್ನುಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.

ಹಿಂದಿನ ಲೇಖನಭಾರಿ ಮಳೆ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ 100 ಕೋಟಿ ಹಾನಿ: ಜಿಟಿಡಿ
ಮುಂದಿನ ಲೇಖನಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕದಡಿ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ:  ಸಚಿವ ಡಾ.ಕೆ.ಸುಧಾಕರ್‌