ಬೆಂಗಳೂರು(Bengaluru): ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ “ಕಮಿಷನ್ ಸಮಾವೇಶ” ಎಂದು ರಾಜ್ಯ ಕಾಂಗ್ರೆಸ್ ಘಟಕ ಟೀಕಿಸಿದೆ.
ಮೂರು ವರ್ಷದ ಸರ್ಕಾರದ ಸಾಧನೆ ಅನಾವರಣಗೊಳಿಸಲು ಇಂದು ರಾಜ್ಯ ಬಿಜೆಪಿ ನಡೆಸುತ್ತಿರುವ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಈ ಕುರಿತು ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದೆ.
40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಬೊಮ್ಮಾಯಿಯವರೇ ನಿಮ್ಮದೇ ಪಕ್ಷದ ಕಾರ್ಯಕರ್ತ & ಗುತ್ತಿಗೆದಾರ ಸಂತೋಷ್ ಪಾಟೀಲ್ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿದೆ.
ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ? ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ. ಬೊಮ್ಮಾಯಿ ಅವರೇ ಭ್ರಷ್ಟೋತ್ಸವದ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ಗುತ್ತಿಗೆದಾರರು ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪ್ರಧಾನಿಗೆ ಪತ್ರ ಬರೆದರೂ ಪ್ರಯೋಜನವಿಲ್ಲ, ಪತ್ರಿಕಾಗೋಷ್ಠಿ ನಡೆಸಿದರೂ ಉಪಯೋಗವಿಲ್ಲ, 40% ಕಮಿಷನ್ ಲೂಟಿ ನಿಂತೇ ಇಲ್ಲ. ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ? ಎಂದು ಚಾಟಿ ಬೀಸಿದೆ.
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
ದುಬೈನಲ್ಲಿ ಧಾರಾಕಾರ ಮಳೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.