ಮೈಸೂರು: ಸರಕಾರಿ ಕಾರ್ಯಕ್ರಮಕ್ಕೆ ಬಂದಿರುವ ಸ್ವಾಮೀಜಿಗಳು ಕಾರ್ಯಕ್ರಮದ ಕುರಿತು ಮಾತನಾಡುವ ಬದಲು ರಾಜಕೀಯ ಮಾತನಾಡಿದರೆ ಹೇಗೆ ಎಂದು ಡಿಕೆಶಿ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದ ಸ್ವಾಮೀಜಿ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಮೈಸೂರು ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಹಿನ್ನೆಲೆ ಮುಂಜಾಗ್ರತ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಮಂಗಳೂರು, ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ರಾಜ್ಯದ 31 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಮಳೆಯಾಗಿದೆ. 31 ಜಿಲ್ಲೆಗಳಲ್ಲಿ 208 ಮಿಮಿ ವಾಡಿಕೆ ಮಳೆಯ ನಿರೀಕ್ಷೆ ಇತ್ತು. ಇಡಿ ರಾಜ್ಯದ್ಯಂತ 205ಮಿಮಿ ಮಳೆ ಆಗಿದೆ. ಜನಸಾಮಾನ್ಯರ ಆಸ್ತಿ, ಪ್ರಾಣಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳ ಸಭೆ ಕರೆದಿದ್ದೇವೆ. ಜೊತೆಗೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವ ಹಿನ್ನೆಲೆ.
ಮುಂಜಾಗ್ರತ ಕ್ರಮ ಕೈಗೊಳ್ಳಲು ಒಂಭತ್ತು ಜಿಲ್ಲೆಯ ಡಿಸಿ, ತಹಸೀಲ್ದಾರ್ ಗಳ ಸಭೆ ನಡೆಸಿ ಮಳೆಯಿಂದ ಯಾವುದೇ ಹಾನಿಯಾಗದ ರೀತಿಯಲ್ಲಿ ಕ್ರಮ ವಹಿಸಲು ಸಿದ್ಧತೆ ನಡೆಸುವಂತೆ ಸೂಚನೆ ನೀಡಿದರು.
ಸಭೆಯ ಬಳಿಕ ಡಿಸಿಎಂ ವಿಚಾರಡಾ ಕುರಿತು ಪರೋಕ್ಷವಾಗಿ ಸಚಿವ ರಾಜಣ್ಣ ವಿರುದ್ದ ಅಸಮಾಧಾನ ಹೊರ ಹಾಕಿದ ಸಚಿವರು ಯಾರಿಗಾದರೂ ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಆ ವಿಚಾರವನ್ನು ಪಕ್ಷದ ವರಿಷ್ಠರ ಬಳಿ ಹೇಳಿಕೊಳ್ಳಬೇಕು ಅದನ್ನು ಬಿಟ್ಟು ಮಾಧ್ಯಮದವರ ಮುಂದೆ ತಮ್ಮ ಆಸೆ ಹೇಳಿಕೊಂಡರೆ ಏನೂ ಪ್ರಯೋಜನ ಹೇಳಿ? ನಿಮ್ಮ ಮುಂದೆ ಹೇಳಿಕೊಂಡರೆ ನೀವೇನಾದರೂ ಸ್ಥಾನ ಕೊಡಿಸ್ತಿರಾ? ಸ್ಥಾನಮಾನದ ವಿಚಾರವನ್ನು ವರಿಷ್ಠರ ಬಳಿ ಮಾತ್ರ ಚರ್ಚೆ ಮಾಡಬೇಕು. ಮಾಧ್ಯಮದ ಬಳಿ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಿದರೆ ಅದರಿಂದ ಸರಕಾರಕ್ಕೂ ಒಳ್ಳೆಯದು ಜನರಿಗೂ ಒಳ್ಳೆಯದು. ಅದು ಬಿಟ್ಟು ವೈಯಕ್ತಿಕ ವಿಚಾರ ಚರ್ಚೆ ಮಾಡಿದರೆ ಅದರಿಂದ ಸರಕಾರಕ್ಕೆ ನಷ್ಟ. ನಮ್ಮ ನಾಯಕರು ಎಚ್ಚರಿಕೆ ಕೊಟ್ಟ ಮೇಲೂ ಕೆಲವರು ಡಿಸಿಎಂ ವಿಚಾರದ ಬಗ್ಗೆ ಮಾತಾಡ್ತಿದ್ದಾರೆ. ನಮ್ಮ ವರಿಷ್ಠರಿಗೆ ತಾಳ್ಮೆ ಹೆಚ್ಚು. ಆದರೆ ಅವರು ಎಲ್ಲವನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಇನ್ನು ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಎಂಬ ಸ್ವಾಮೀಜಿ ಹೇಳಿಕೆ ವಿಚಾರದ ಬಗ್ಗೆ ಹೇಳಿಕೆ ತಿರುಗೇಟು ಕೊಟ್ಟ ಸಚಿವರು ಸ್ವಾಮೀಜಿಗಳು ಯಾವ ವಿಚಾರವನ್ನು ಎಲ್ಲಿ ಮಾತಾಡಬೇಕು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ. ಸರಕಾರಿ ಸಮಾರಂಭಕ್ಕೆ ಬಂದು ರಾಜಕೀಯ ವಿಚಾರ ಮಾತಾಡಿದರೆ ಹೇಗೆ? ಸ್ವಾಮೀಜಿ ತಮ್ಮ ಮಠದಲ್ಲಿ ಆ ವಿಚಾರ ಮಾತಾಡಲಿ.
ತಮ್ಮ ಭಕ್ತರ ಮುಂದೆ ಅದನ್ನು ಹೇಳಲಿ. ಯಾರಿಗೆ ಯಾವ ವಿಚಾರ ಎಲ್ಲಿ ಮಾತಾಡಬೇಕು ಎಂದು ಹೇಳುವ ಸ್ಥಿತಿ ಬಂದಿದ್ದೆ ಇದೇ ಬೇಸರದ ವಿಚಾರ ಎಂದು ಹೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ಸರಕಾರಿ ಜಾಗಗಳ ರಕ್ಷಿಸುವ ಸರ್ವೆ ಶುರುವಾಗಿದೆ. ಒಟ್ಟು 14 ಲಕ್ಷ ಸರಕಾರಿ ಜಾಗಗಳಿವೆ. ಇವುಗಳಲ್ಲಿ ಒತ್ತುವರಿ ಎಷ್ಟು ಆಗಿದೆ ಎಂಬ ಸರ್ವೆ ಶುರು ಮಾಡಿದ್ದೇವೆ.
ಜುಲೈ ಅಂತ್ಯಕ್ಕೆ ಸರ್ವೆ ಮುಗಿಯಲಿದೆ. ನಂತರ ಒತ್ತುವರಿ ತೆರವು ಆರಂಭಿಸುತ್ತೇವೆ. ಸಾರ್ವಜನಿಕವಾಗಿ ಒತ್ತುವರಿ ಜಾಗದ ವಿಚಾರ ತಿಳಿಸಿ ತೆರವು ಮಾಡ್ತಿವಿ. ರಾಜ್ಯದಲ್ಲಿ ಈಗ ಸಮೃದ್ಧಿಯಾದ ಮಳೆಯಾಗಿದೆ. ಇದುವರೆಗೂ ಒಟ್ಟು 20 ಜನ ಮೃತಪಟ್ಟಿದ್ದಾರೆ. ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕೊಡುವಷ್ಟು ಹಣ ನಮ್ಮಲ್ಲಿದೆ. ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮುಂದೆ ಮಳೆ ಹೆಚ್ಚಾಗಿ ನಷ್ಟ ಹೆಚ್ಚಾದರೆ ಪರಿಹಾರ ಕೇಳ್ತಿವಿ ಎಂದು ಸಚಿವರು ಹೇಳಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.