ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಕೋಲಾರ(Kolar): ಮಕ್ಕಳನ್ನು ಕಳೆದುಕೊಂಡು ಸಮಾಜ ಕಟ್ಟುವುದೇನಿದೆ? ಮಕ್ಕಳ ಜೀವ ತೆಗೆಯಲು ಹಾಗೂ ಅವರ ಜೀವನ ಅಳಿಸಲು ಯಾರಿಗೂ ಅಧಿಕಾರ ಇಲ್ಲ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ತಿಳಿಸಿದರು.
ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚಿತ್ರದುರ್ಗದ ಮುರುಘಾ ಮಠದಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದಲೂ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪ್ರಕರಣ ಏಕೆ ತಡವಾಗಿ ಬೆಳಕಿಗೆ ಬಂತು? ಘಟನೆ ನಡೆದಾಗ ಡಿವೈಎಸ್ಪಿ ಯಾರಿದ್ದರು, ಅಧಿಕಾರಿಗಳು ಯಾರಿದ್ದರು? ಮಠದಲ್ಲಿನ ಅಧಿಕಾರಿಗಳು ಏಕೆ ಇಷ್ಟು ವರ್ಷ ಮುಚ್ಚಿಟ್ಟಿದ್ದರು? ಪೊಲೀಸರು ಏಕೆ ವಿಫಲರಾದರು, ಕ್ರಮ ವಹಿಸಲು ಉಂಟಾದ ಅಡೆತಡೆ ಏನು ಎಂಬಿತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಈಗಾಗಲೇ ಹಲವರ ಮೇಲೆ ಕ್ರಮವೂ ಆಗಿದೆ ಎಂದರು.
ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿ ಎಷ್ಟೇ ದೊಡ್ಡವನಿರಲಿ, ಆತನಿಗೆ ಶಿಕ್ಷೆ ಆಗಲೇಬೇಕು. ಇಂಥ ಘಟನೆ ನಡೆದಾಗ ಸಮಾಜ ಹೆದರಬಾರದು. ಬೇಗನೇ ಪತ್ತೆ ಹಚ್ಚಿದ್ದರೆ ಮಠವೂ ಉಳಿಯುತಿತ್ತು, ಮಕ್ಕಳಿಗೂ ತೊಂದರೆ ಆಗುತ್ತಿರಲಿಲ್ಲ. ಈಗ ಎಲ್ಲಾ ಸೇರಿ ಮುಳುಗಿಸಿದ್ದಾರೆ ಎಂದು ಹೇಳಿದರು.