ಶಿವಮೊಗ್ಗ : ಸಾಗರ ತಾಲೂಕಿನ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್ನಲ್ಲಿ ವ್ಹೀಲಿಂಗ್ ಮಾಡಿದ ಪುಂಡನಿಗೆ ಪೊಲೀಸರು ದಂಡ ವಿಧಿಸಿ, ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ.
ಆಗಸ್ಟ್ 15ರಂದು ಯುವಕ ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ಮಾಡಿದ್ದ. ಆತನ ಬೈಕ್ ಸ್ಟಂಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಗ್ರಾಮಾಂತರ ಠಾಣೆ ಪೊಲೀಸರು ಬೈಕ್ ಸವಾರನನ್ನು ಪತ್ತೆ ಹಚ್ಚಿ, ಆತನಿಗೆ 5000 ರೂ. ದಂಡ ವಿಧಿಸಿ, ವ್ಹೀಲಿಂಗ್ ಮಾಡಿದ ಯುವಕನ ವಿರುದ್ಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















