ದಕ್ಷಿಣ ಭಾರತದ ರಾಜಕೀಯ ರಂಗದಲ್ಲಿ ಈಗ ನಟರ ಅಬ್ಬರ ಜೋರಾಗಿದೆ. ತಮಿಳುನಾಡಿನಲ್ಲಿ ನಟ ದಳಪತಿ ವಿಜಯ್ ತಮ್ಮ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಮೂಲಕ ಹೊಸ ಸಂಚಲನ ಮೂಡಿಸಿ ಸಿಎಂ ಪಟ್ಟದತ್ತ ಹೆಜ್ಜೆ ಹಾಕುತ್ತಿದ್ದರೆ, ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ್ ಈಗಾಗಲೇ ತಮ್ಮ ರಾಜಕೀಯ ಶಕ್ತಿ ಪ್ರದರ್ಶಿಸಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ, “ಕರ್ನಾಟಕದಲ್ಲೂ ಒಬ್ಬ ಬಿಗ್ ಸ್ಟಾರ್ ರಾಜಕೀಯಕ್ಕೆ ಬಂದು ಬದಲಾವಣೆ ತರಬಾರದೇ?” ಎಂಬ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ.
ಆ ಸಾಮರ್ಥ್ಯ ಇಲ್ಲಿ ಯಾರಿಗಿದೆ ಎಂದು ‘ರಿಯಲ್ ಸ್ಟಾರ್’ ಉಪೇಂದ್ರ ಅವರು ನೀಡಿರುವ ಹೇಳಿಕೆ ಭಾರಿ ಕುತೂಹಲ ಕೆರಳಿಸಿದೆ. ರಾಜಕೀಯ ಬದಲಾವಣೆ ಬಗ್ಗೆ ಮಾತನಾಡಿರುವ ಉಪೇಂದ್ರ, “ತಮಿಳುನಾಡಿನ ವಿಜಯ್ ಅವರಂತೆ ಕರ್ನಾಟಕದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಇಂತಹ ಬದಲಾವಣೆ ಸಾಧ್ಯವಿದೆ.
ಇಂದು ಎಲ್ಲ ಕ್ಷೇತ್ರಗಳಲ್ಲೂ ಬದಲಾವಣೆ ಗಾಳಿ ಬೀಸುತ್ತಿದೆ, ಹಾಗೆಯೇ ರಾಜಕೀಯದಲ್ಲೂ ದೊಡ್ಡ ಮಟ್ಟದ ಬದಲಾವಣೆಗಳಾಗುವುದು ಅನಿವಾರ್ಯ” ಎಂದು ಭವಿಷ್ಯ ನುಡಿದಿದ್ದಾರೆ. “ಜನಸಾಮಾನ್ಯರೇ ಸ್ಟಾರ್ ಆಗಬೇಕು” ಎನ್ನುವ ಮೂಲಕ ಯಾವ ಸ್ಟಾರ್ ರಾಜಕೀಯಕ್ಕೆ ಬರಬೇಕು ಎನ್ನುವ ಪ್ರಶ್ನೆಗೆ ಉಪೇಂದ್ರ ಅವರು ತಮ್ಮದೇ ಆದ ‘ಪ್ರಜಾಕೀಯ’ ಶೈಲಿಯಲ್ಲಿ ಉತ್ತರಿಸಿದ್ದಾರೆ.
















