ಮನೆ ರಾಜ್ಯ ಯಾರೇ ರಾಜಕಾಲುವೆ ಒತ್ತುವರಿ ಮಾಡಿದ್ದರೂ ತೆರವು: ಸಿಎಂ ಬೊಮ್ಮಾಯಿ

ಯಾರೇ ರಾಜಕಾಲುವೆ ಒತ್ತುವರಿ ಮಾಡಿದ್ದರೂ ತೆರವು: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru):   ರಾಜಕಾಲುವೆಯನ್ನ ಯಾರೇ ಒತ್ತುವರಿ ಮಾಡಿಕೊಂಡಿದರೂ ಸರಿ ತೆರವು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಯಾವುದೇ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಯಾರೇ ಒತ್ತುವರಿ ಮಾಡಿದ್ರೂ ತೆರವು  ಮಾಡಲಾಗುತ್ತದೆ. ರಾಜಕಾಲುವೆ ಒತ್ತುವರಿ ಕಾರ್ಯಚರಣೆಯಿಂದ ಹಿಂದೆ ಸರಿಯಲ್ಲ ಎಂದರು.

ಅದಿಕ ಮಳೆಯಿಂದ ಎಲ್ಲರಿಗೂ ತೊಂದರೆಯಾಗಿದೆ.  ಒತ್ತುವರಿ ತೆರವು ಆರಂಭವಾಗಿದೆ ನಿಲ್ಲುವುದಿಲ್ಲ ಕೋರ್ಟ್ ಕೂಡ ಒತ್ತುವರಿ ತೆರವಿಗೆ ಈಗಾಗಲೇ ಆದೇಶೀಸಿದೆ. ಭಾರಿ ಮಳೆಯಿಂದ ಐಟಿ ಬಿಟಿಯವರಿಗೂ ತೊಂದರೆಯಾಗಿದೆ ರಸ್ತಯಲ್ಲಿ ಓಡಾಡುವವರು ಜನಸಾಮಾನ್ಯರಿಗೂ ತೊಂದರೆಯಾಗಿದೆ ಎಂದು ತಿಳಿಸಿದರು.

ಹಿಂದಿನ ಲೇಖನ‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿ ಬಿಡುಗಡೆ
ಮುಂದಿನ ಲೇಖನಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿ: ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಕಾರ್ಲೊಸ್‌ ಅಲ್ಕರಾಜ್‌