ಮನೆ ಅಪರಾಧ ಪತ್ನಿ ಆತ್ಮಹತ್ಯೆ: ಪತ್ನಿ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪತಿಯು ಸಾವು

ಪತ್ನಿ ಆತ್ಮಹತ್ಯೆ: ಪತ್ನಿ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪತಿಯು ಸಾವು

0

ಉತ್ತರ ಪ್ರದೇಶ(Uttar Pradesh): ಗಂಡ ಹಣ ಕೊಡದಿದ್ದಕ್ಕೆ ಹೆಂಡತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದು, ಪತ್ನಿಯ ಚಿತೆಗೆ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲಯ ಪತಿ ಯತ್ನಿಸಿರುವ ಘಟನಾ ಮಹೋಬಾ ಜಿಲ್ಲೆಯ ಕುಲ್ಪಹಾಡ್ ಕೊಟ್ವಾಲಿ ಪ್ರದೇಶದ ಜೈತ್‌ಪುರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಯತ್ನಿಸಿದ ವ್ಯಕ್ತಿಯನ್ನು ಬ್ರಿಜೇಶ್ ಎಂದು ಗುರುತಿಸಲಾಗಿದ್ದು, ಜೈತ್‌ಪುರ ಗ್ರಾಮದ ನಿವಾಸಿಯಾದ ಈತ ತನ್ನ ಪತ್ನಿ ಉಮಾ ಎಂಬಾಕೆ ಜೊತೆ ವಾಸಿಸುತ್ತಿದ್ದ. ಪತ್ನಿ ಉಮಾ ನಿನ್ನೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆಯ ಅಂತ್ಯಸಂಸ್ಕಾರ ಮಾಡುತ್ತಿದ್ದಾಗ ಆಕೆಯ ಚಿತೆ ಮೇಲೆ ಹಾರಿದ ಬ್ರಿಜೇಶ್, ತಾನೂ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ.

ಇನ್ನು ಪತಿ ಬ್ರಿಜೇಶ್ ಹಾಗೂ ಪತ್ನಿ ಉಮಾ ನಡುವೆ ಮೊನ್ನೆ ರಾತ್ರಿ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿದೆ. ಆಕೆ 5 ಸಾವಿರ ಹಣ ಕೊಡುವಂತೆ ಪತಿಗೆ ಕೇಳಿದ್ದಾಳೆ. ಅದಕ್ಕೆ ಪತ್ನಿಗೆ ಹಣ ಕೊಡಲು ಬ್ರಿಜೇಶ್ ನಿರಾಕರಿಸಿದ್ದಾನೆ. ಇದೇ ಕಾರಣಕ್ಕೆ ಕೋಪಗೊಂಡ ಉಮಾ ಆತ್ಮಹತ್ಯೆಗೆ ಶರಣಾಗಿದ್ದಳು. ರಾತ್ರಿಯೇ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಉಮಾ ಅಂತ್ಯಸಂಸ್ಕಾರಕ್ಕೆ ಮನೆಯವರು ಸಿದ್ಧತೆ ನಡೆಸಿದ್ದಾರೆ. ಆಗ ಆಕೆಯ ಚಿತೆಗೆ ಬೆಂಕಿ ಇಡುತ್ತಿದ್ದಂತೆ ಬ್ರಿಜೇಶ್ ಕೂಡ ಉರಿಯುತ್ತಿರುವ ಬೆಂಕಿಗೆ ಹಾರಿದ್ದಾನೆ. ಕೂಡಲೇ ಕುಟುಂಬಸ್ಥರು, ಸ್ಥಳೀಯರು ಆತನನ್ನು ರಕ್ಷಿಸುವ ಹೊತ್ತಿಗೆ ಅತನ ದೇಹದ ಕೆಲವು ಭಾಗಗಳು ಸುಟ್ಟಿದ್ದವಂತೆ. ನಂತರ ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ಶಾಕ್‌ಗೆ ಒಳಗಾದ ಪತಿ ಬ್ರಿಜೇಶ್ ಖಿನ್ನತೆಗೆ ಒಳಗಾಗಿದ್ದಾನೆ. ಆಕೆಯ ನಿಧನದ ನಂತರ ತನಗೆ ಬದುಕಲು ಇಷ್ಟವಿಲ್ಲ ಎಂದು ಬ್ರಿಜೇಶ್ ಈ ರೀತಿ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.

ಇನ್ನು ವರದಕ್ಷಿಣೆಗಾಗಿ ಉಮಾಳನ್ನು ಆಕೆಯ ಪತಿ ಮತ್ತು ಅತ್ತೆಯವರೇ ಕೊಂದಿದ್ದಾರೆ ಎಂದು ಉಮಾ ಕುಟುಂಬಸ್ಥರು ಆರೋಪಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.

ಹಿಂದಿನ ಲೇಖನಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ವಕೀಲರಿಗೆ 15 ಲಕ್ಷ ರೂ. ಪರಿಹಾರ
ಮುಂದಿನ ಲೇಖನಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬೊಮ್ಮಾಯಿ