ವಿನಾ ಡೆಲ್ ಮಾರ್: ಮಧ್ಯ ಚಿಲಿಯಲ್ಲಿ ತಾಪಮಾನ ಹೆಚ್ಚಳದಿಂದಾಗಿ ಉಂಟಾದ ಕಾಡ್ಗಿಚ್ಚಿಗೆ ಇದುವರೆಗೆ 99 ಜನರು ಮೃತಪಟ್ಟಿದ್ದು ಅದರಲ್ಲಿ 32 ಮೃತದೇಹಗಳನ್ನು ಗುರುತಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ನಂದಿಸಲು 19 ಹೆಲಿಕಾಪ್ಟರ್ಗಳು ಮತ್ತು 450 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕಾಡ್ಗಿಚ್ಚಿನಿಂದ ಸುಮಾರು 1,600 ಮನೆಗಳು ನಾಶವಾಗಿದ್ದು, ನೂರಾರು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಮಧ್ಯ ಚಿಲಿಯ ವಾಲ್ಪಾರೈಸೊ ಪ್ರದೇಶದ ಹಲವು ಪ್ರದೇಶಗಳಲ್ಲಿ ಹೊಗೆ ಆವರಿಸಿದೆ. ಸಾವಿರಾರು ಜನರು ತಮ್ಮ ಮನೆಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕಾಡ್ಗಿಚ್ಚು ಪೀಡಿತ ಪ್ರದೇಶಗಳನ್ನು ತಲುಪಲು ರಕ್ಷಣಾ ತಂಡಗಳು ಹರಸಾಹಸ ಪಡುತ್ತಿವೆ ದಟ್ಟ ಅರಣ್ಯವಾದ ಕಾರಣ ಪ್ರದೇಶವನ್ನು ತಲುಪುವುದು ಕಷ್ಟ ಸಾಧ್ಯವಾಗಿದೆ.
ವಾಲ್ಪಾರೈಸೊದಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಆಂತರಿಕ ಸಚಿವ ಕೆರೊಲಿನಾ ತೋಹಾ ಆತಂಕ ವ್ಯಕ್ತಪಡಿಸಿದ್ದಾರೆ.
ಬೇಸಿಗೆಯ ಸಮಯದಲ್ಲಿ ಚಿಲಿಯಲ್ಲಿ ಕಾಡ್ಗಿಚ್ಚುಗಳು ಸಾಮಾನ್ಯವಾಗಿದ್ದು ಆದರೆ ಇದನ್ನು ನಿಭಾಯಿಸುವುದು ಕಷ್ಟದ ಕೆಲಸ ಎಂದು ಹೇಳಿದ್ದಾರೆ. ಅಲ್ಲದೆ 2010ರ ಭೂಕಂಪದ ನಂತರ ದೇಶವು ಅತ್ಯಂತ ಭೀಕರ ವಿಪತ್ತನ್ನು ಎದುರಿಸುತ್ತಿದೆ ಎಂದು ಅವರು ಹೇಳಿದರು. ವಾಲ್ಪಾರೈಸೊ ಪ್ರದೇಶದಲ್ಲಿ ಮೂರು ಶೆಲ್ಟರ್ಗಳನ್ನು ಸ್ಥಾಪಿಸಲಾಗಿದ್ದು ಇಲ್ಲಿನ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಶುಕ್ರವಾರ ಮತ್ತು ಶನಿವಾರದ ನಡುವೆ ಸಂಭವಿಸಿದ ಕಾಡ್ಗಿಚ್ಚಿನಿಂದ ಹಾನಿಗೊಳಗಾದ ಪ್ರದೇಶವು 30,000 ರಿಂದ 43,000 ಹೆಕ್ಟೇರ್ಗಳಿಗೆ ಏರಿದೆ ಎಂದು ತೋಹಾ ಹೇಳಿದ್ದಾರೆ. ನಗರ ಪ್ರದೇಶಗಳಿಗೆ ತೀರಾ ಸಮೀಪದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಧಿಕಾರಿಗಳಿಗೆ ದೊಡ್ಡ ಆತಂಕವಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.