ಮೈಸೂರು: ನಗರದ ಮೆಡಿಕಲ್ ಕಾಲೇಜಿನ ಸಮುದಾಯ ವೈದ್ಯಶಾಸ್ತ್ರ ವಿಭಾಗ ಜೆಎಸ್ ಎಸ್ ನರ್ಸಿಂಗ್ ಕಾಲೇಜು, ಬಂಬೂ ಬಜಾರ್ ಮೇದಾರ ಬ್ಲಾಕ್ ನ ಜೆಎಸ್ ಎಸ್ ಅರ್ಬನ್ ಹೆಲ್ತ್ ಸಹಯೋಗದೊಂದಿಗೆ ವಿಶ್ವ ಕ್ಷಯರೋಗ ದಿನವನ್ನು ಆಚರಿಸಲಾಯಿತು.
ಜೆಎಸ್ ಎಸ್ ಅರ್ಬನ್ ಹೆಲ್ತ್ ಸೆಂಟರ್ ನ ಮೆಡಿಕಲ್ ಆಫೀಸರ್ ಡಾ.ಎಚ್.ವಿ.ರಮಾ, ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಪಕ ನಿಂಗರಾಜು ಕಾರ್ಯಕ್ರಮಕ್ಕೆ ಪ್ರಯುಕ್ತ ಆಯೋಜಿಸಿದ್ದ ಜಾಗೃತಿ ಜಾಥಾ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾ ಕ್ಷಯ ರೋಗ ಅಧಿಕಾರಿ ಡಾ.ಮೊಹಮ್ಮದ್ ಶಿರಾಜ್ ಅಹಮದ್ ಅವರು ಪ್ರಸ್ತುತ ಸನ್ನಿವೇಶ, ಟಿಬಿ ರೋಗಲಕ್ಷಣಗಳು, ಚಿಕಿತ್ಸೆಯ ಕಟ್ಟುಪಾಡುಗಳ ಬಗ್ಗೆ ಮಾತನಾಡಿದರು. ನಿಕ್ಷಯ್ ಪೋಶನ್ ಅಡಿಯಲ್ಲಿ ನೀಡಲಾದ ಪ್ರೋತ್ಸಾಹಗಳ ಬಗ್ಗೆ ವಿವರಿಸಿದರು. ಡಾ.ಪ್ರವೀಣ್ ಕುಲಕರ್ಣಿ ಅವರು ಕ್ಷಯರೋಗದ ಬಗ್ಗೆ ಪ್ರೇಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಇದೇ ವೇಳೆ ಡಾ.ಮೊಹಮ್ಮದ್ ಶಿರಾಜ್ ಅಹಮದ್, ಜೆಎಸ್ಎಸ್ ನಗರ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರಾದ ಎಚ್ ಬಿ, ಸಂತೋಷ್, ಹಿರಿಯ ಚಿಕಿತ್ಸಾ ಮೇಲ್ವಿಚಾರಕ ವಿ.ಸಂಪತ್, ಡಿಟಿಸಿಯ ಟಿಬಿ ಆರೋಗ್ಯ ಸಂದರ್ಶಕರು ಉಮೇಶ್ ಅವರನ್ನು ಸನ್ಮಾನಿಸಲಾಯಿತು. ಜತೆಗೆ ಜೆಎಸ್ಎಸ್ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಿಂಗರಾಜು ಬರೆದ ಟಿಬಿ ಗೀತೆಯನ್ನು ವಿದ್ಯಾರ್ಥಿಗಳು ಹಾಡಿದರು. ಪ್ರೇಕ್ಷಕರಲ್ಲಿ ಜಾಗೃತಿ ಮೂಡಿಸಲು ಕಿರುನಾಟಕ ಪ್ರದರ್ಶಿಸಲಾಯಿತು.
ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಶ್ವೇತಾಶ್ರೀ ಎಂ, ಮತ್ತು ಡಾ.ಕಾವ್ಯ ಜಿ.ಯು, ಡಾ.ಮೈಥಿಲಿ ಎಂ.ಆರ್, ಡಾ.ಸುನೀತಾ ಸಿಂಗ್ ಉಪಸ್ಥಿತರಿದ್ದರು.
ಆರೋಗ್ಯ ನಿರೀಕ್ಷಕರಾದ ಸಂತೋಷ್ ಎಚ್ ಬಿ ಮತ್ತು ಸುನಿಲ್ ವೈ ಎಸ್, ಮಲ್ಲಿಕಾರ್ಜುನ ಸ್ವಾಮಿ ಇತರರು ಇದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.