ಧಾರವಾಡ : ಯೋಗೀಶ್ಗೌಡ ಕೊಲೆ ಕೇಸ್ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಾಕ್ಷ್ಯನಾಶ ಕೇಸ್ನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ಗೌಡ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯ ಸಾಕ್ಷ್ಯನಾಶ ಮಾಡಲು ಪ್ರಯತ್ನ ಮಾಡಿದ್ದರು ಎಂದು ಧಾರವಾಡ ಶಾಸಕ ವಿನಯ್ ಕುಲಕರ್ಣಿ ಮೇಲೆ ಸಿಬಿಐ ಅಧಿಕಾರಿಗಳು ಸಾಕ್ಷಿ ನಾಶದ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ತಿಂಗಳ ಹಿಂದೆ ಹೈಕೋರ್ಟ್ ಸಾಕ್ಷ್ಯನಾಶದ ಅರ್ಜಿ ವಜಾ ಮಾಡಿತ್ತು. ಅರ್ಜಿ ವಜಾ ಪ್ರಶ್ನಿಸಿ, ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಸುಪ್ರೀಂಕೋರ್ಟ್ ಸಿಬಿಐ ಅರ್ಜಿ ಪುರಸ್ಕರಿಸಿದ್ದು, ಶಾಸಕ ವಿನಯ್ ಕುಲಕರ್ಣಿಗೆ ಸಾಕ್ಷ್ಯನಾಶದ ಪ್ರಕರಣದಲ್ಲಿ ಹಿನ್ನಡೆಯಾಗಿದೆ.















