ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಸ್ ಆಯೋಜಿಸುವ ಕ್ರಿಕೆಟ್ ಟೂರ್ನಮೆಂಟ್ ಗಳಲ್ಲಿ ಅವಕಾಶ ಕೊಡಿಸುವುದಾಗಿ ಯುವ ಕ್ರಿಕೆಟಿಗನ ಪೋಷಕರಿಂದ 12.23 ಲಕ್ಷ ರೂ. ಪಡೆದು ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಖಾಸಗಿ ಕ್ರಿಕೆಟ್ ಅಕಾಡೆಮಿ ತರಬೇತುದಾರನ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಜಾಜಿನಗರ ನಿವಾಸಿ ಶ್ಯಾಮ್ ಪ್ರಸಾದ್ ಶೆಟ್ಟಿ ಎಂಬವರು ಕೋರ್ಟ್ ಗೆ ಸಲ್ಲಿಸಿದ್ದ ಪಿಸಿಆರ್ ಸಂಬಂಧ ಕೋರ್ಟ್ ಸೂಚನೆ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು ಗಾಂಧಿನಗರದ ರೋರ್ ಕ್ರಿಕೆಟ್ ಅಕಾಡೆಮಿ ತರಬೇತುದಾರ ಗೌರವ್ ಧೀಮಾನ್ ವಿರುದ್ಧ ವಂಚನೆ, ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರುದಾರ ಶ್ಯಾಮ್ ಪ್ರಸಾದ್ ಶೆಟ್ಟಿ ಪುತ್ರ ಆಯುಷ್ ಪೂರ್ಣಚಂದ್ರ ಶೆಟ್ಟಿ (23) ಕೆಎಸ್ಸಿಎ ನಡೆಸುವ ಪ್ರಥಮ ದರ್ಜೆ ಕ್ರಿಕೆಟ್ ಲೀಗ್ ಸಂಬಂಧ ಮೌಂಟ್ ಜಾಯ್ ಕ್ರಿಕೆಟ್ ಕ್ಲಬ್ ಪರ ಕ್ರಿಕೆಟ್ ಆಡು ತ್ತಿದ್ದರು. ಈ ಟೂರ್ನಿಯಲ್ಲಿ ಉತ್ತಮ ರನ್ ಗಳಿಸಿದರಿಂದ ಮಿರ್ಜಾ ಇಸ್ಮಾ ಯಿಲ್ ಅಂಡರ್-23 ವಲಯ ಮಟ್ಟದ ಟೂರ್ನಿಗೆ ಅವಕಾಶ ಪಡೆದಿದ್ದರು. ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡದ್ದರಿಂದ ಇತರ ಮೂರು ಪಂದ್ಯಗಳಿಗೆ ಅವಕಾಶ ನಿರಾಕರಿಸಲಾಗಿತ್ತು.
ಹೀಗಾಗಿ ಆಯುಷ್ ಪೂರ್ಣಚಂದ್ರ ಶೆಟ್ಟಿ ಗಾಂಧಿನಗರದ ಶೇಷಾದ್ರಿ ರಸ್ತೆಯಲ್ಲಿರುವ ರೋರ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿಗೆ ಸೇರಿಕೊಂಡಿದ್ದರು. ಆಗ ಅಕಾಡೆಮಿಯಲ್ಲಿ ತರಬೇತುದಾರನಾಗಿದ್ದ ಗೌರವ್ ಧೀಮಾನ್ ಪರಿಚಯವಾಗಿದ್ದು, ಒಮ್ಮೆ ದೂರುದಾರರ ಮನೆಗೂ ಬಂದಿದ್ದ. ಆಗ, ಕೆಎಸ್ ಸಿಎ ಅಧ್ಯಕ್ಷ ಬ್ರಿಜೇಶ್ ಪಟೇಲ್ ಅವರ ಸ್ವಸ್ತಿಕ್ ಯೂನಿಯನ್ ಕ್ರಿಕೆಟ್ ಕ್ಲಬ್ ವ್ಯವಸ್ಥಾಪಕರು ಮುಂದಿನ ದಿನಗಳಲ್ಲಿ 2 ದಿನದ ಪ್ರಥಮ ದರ್ಜೆ ಲೀಗ್ ಸರ್.ಮಿರ್ಜಾ ಇಸ್ಮಾಯಿಲ್ ಟ್ರೋಫಿ, ಟಿ-20 ಮಾದರಿಯ ಕಸ್ತೂರಿ ರಂಗನ್ ಮೆಮೋರಿಯಲ್ ಟ್ರೋಫಿ, 50 ಓವರ್ ನ ಏಕದಿನ ಪಂದ್ಯ ವೈ.ಎಸ್. ರಾಮಯ್ಯ ಮೆಮೋರಿಯಲ್ ಟ್ರೋಫಿ ಟೂರ್ನಮೆಂಟ್ ಗಳಿಗೆ ಆಟಗಾರರನ್ನು ಆಯ್ಕೆ ಮಾಡಲಿದ್ದಾರೆ. ಈ ಟೂರ್ನಮೆಂಟ್ ಗಳು ಹಾಗೂ ಎಸ್. ಎ.ಶ್ರೀನಿವಾಸ ಮೆಮೋರಿಯಲ್ ಟ್ರೋಫಿ ಅಂಡರ್-23 ವಲಯ ಮಟ್ಟದ ಪಂದ್ಯಾವಳಿಗೆ ಆಯುಷ್ಗೆ ಅವಕಾಶ ಕೊಡಿಸುತ್ತೇನೆ ಎಂದಿದ್ದರು.
ಅಲ್ಲದೆ 2022-23ನೇ ಸಾಲಿನಲ್ಲಿ ಮೌಂಟ್ ಜಾಯ್ ಕ್ರಿಕೆಟ್ ಕ್ಲಬ್ ಪರ ಆಡದಂತೆ ಆಯುಷ್ ಗೆ ತಿಳಿಸಿದ್ದ. ಟೂರ್ನಮೆಂಟ್ ಗಳಲ್ಲಿ ಅವಕಾಶದ ಜತೆಗೆ ಒಳ್ಳೆಯ ಬ್ಯಾಟ್ ಗಳು ಹಾಗೂ ಉತ್ತಮ ತರಬೇತಿ ಕೊಡಿಸುತ್ತೇನೆ ಎಂದು ದೂರುದಾರರಿಂದ ವಿವಿಧ ಹಂತಗಳಲ್ಲಿ 12.23 ಲಕ್ಷ ರೂ. ಪಡೆದುಕೊಂಡಿದ್ದನು. ಆನಂತರ ಯಾವುದೇ ಟೂರ್ನಿಗಳಲ್ಲಿ ಅವಕಾಶ ಕೊಡಿಸದೆ, ಕ್ರಿಕೆಟ್ ಸಾಮಗ್ರಿಗಳನ್ನು ಕೊಡಿಸದೆ ವಂಚಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.