ಮನೆ ಅಪರಾಧ ಮದುವೆಯಾಗುವುದಾಗಿ ನಂಬಿಸಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಯುವಕ ಪರಾರಿ: ಪೊಲೀಸ್ ಠಾಣೆ​ ಎದುರು ಯುವತಿ ಧರಣಿ

ಮದುವೆಯಾಗುವುದಾಗಿ ನಂಬಿಸಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಯುವಕ ಪರಾರಿ: ಪೊಲೀಸ್ ಠಾಣೆ​ ಎದುರು ಯುವತಿ ಧರಣಿ

0

ಕೊಪ್ಪಳ: ಮದುವೆಯಾಗುವುದಾಗಿ ನಂಬಿಸಿ ಪ್ರಿಯತಮೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾದ ಪ್ರಿಯಕರನ ವಿರುದ್ಧ ಕಾರಟಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Our Whatsapp Group

ಗಂಗಾವತಿ ತಾಲೂಕು ನಿವಾಸಿ ರವಿರಾಜ್ ಅತ್ಯಾಚಾರ ಎಸಗಿದ ಆರೋಪಿ.

ಆರೋಪಿ ರವಿರಾಜ್​​ನನ್ನು ಬಂಧಿಸಿ, ನನ್ನ ಜೊತೆ ಮದುವೆ ಮಾಡಿಸಿ ಎಂದು ಸಂತ್ರಸ್ತೆ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದಾಳೆ. 2020ರಲ್ಲಿ ಸಂತ್ರಸ್ತೆ ದ್ವೀತಿಯ ಪಿಯುಸಿ ಓದುವಾಗ ರವಿರಾಜ್​ ಪರಿಚಯವಾಗಿದ್ದಾನೆ. ಪರಿಚಹ ಸ್ನೇಹ, ಸ್ನೇಹ ಪ್ರೀತಿಯಾಗಿ ಬದಾಲಗಿದೆ. ಇಬ್ಬರೂ 2021ರಿಂದ ಪರಸ್ಪರ ಪ್ರೀತಿಸಲು ಆರಂಭಿಸಿದ್ದಾರೆ.

ಈ ವಿಚಾರ ಪ್ರೇಮಿಗಳ ಮನೆಯಲ್ಲಿ ಗೊತ್ತಾಗಿದ್ದು, ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಸಂತ್ರಸ್ತೆ ಪ್ರೀತಿ ಬೇಡ ಅಂತ ರವಿರಾಜ್​ನಿಂದ ದೂರು ಉಳಿಯಲು ಆರಂಭಿಸಿದ್ದಾಳೆ. ಆದರೆ ರವಿರಾಜ್​ ಸಂತ್ರಸ್ತೆ ಮೆನೆಯವರ ಮತ್ತು ತನ್ನ ಪೋಷಕರ ಜೊತೆ ಮಾತನಾಡಿ ಮದುವೆಗೆ ಒಪ್ಪಿಸಿದ್ದಾನೆ.

ಬಳಿಕ ರವಿರಾಜ್​ 2021ರ ಮಾರ್ಚ್​​ 17 ರಂದು ರಾತ್ರಿ 8 ಗಂಟೆ ಸುಮಾರಿಗೆ ಸಂತ್ರಸ್ತೆ ಮನೆಗೆ ಹೋಗಿ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ತಾವು ಇಬ್ಬರೇ ಇರುವ ಖಾಸಗಿ ವಿಡಿಯೋವನ್ನು ಇಟ್ಟುಕೊಂಡು, ರವಿವಾರಜ್​ ಬ್ಲ್ಯಾಕ್​ಮೇಲ್​ ಮಾಡಲು ಆರಂಭಿಸಿದ್ದಾರೆ. ನಂತರ ಅನೇಕ ಸಲ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಸಂತ್ರಸ್ತೆ ಗರ್ಭಿಣಿಯಾಗಿದ್ದಾಳೆ. ಆಗ, ರವಿರಾಜ್​ ಗರ್ಭಪಾತ ಮಾಡಿಸಿದ್ದಾನೆ. ಬಳಿಕ ಸಂತ್ರಸ್ತೆ ಮದುವೆ ಮಾಡಿಕೊ ಎಂದು ದುಂಬಾಲು ಬಿದ್ದಿದ್ದಾಳೆ.

ಆದರೆ, ರವಿವಾರ್​ ಮದುವೆ ಮಾಡಿಕೊಳ್ಳಲು ಒಪ್ಪಲಿಲ್ಲ. ಆಗ, ಸಂತ್ರಸ್ತೆ ಈ ವಿಚಾರವನ್ನು ಸಂತ್ರಸ್ತೆ ತನ್ನ ಮನೆಯವರಿಗೆ ಮತ್ತು ರವಿರಾಜ್​ ಮನೆಯವರಿಗೆ ತಿಳಿಸಿದ್ದಾಳೆ. ಆಗ, ಎರಡೂ ಮನೆಯವರು ಸೇರಿ ಪಂಚಾಯಿತಿ ಮಾಡಿ, ರವಿರಾಜ್​ಗೆ ಮದುವೆಯಾಗುವಂತೆ ಹೇಳಿದ್ದಾರೆ. ಆದರೂ ಕೂಡ ರವಿರಾಜ್​ ಮದುವೆಯಾಗಲು ಒಪ್ಪಲಿಲ್ಲ. ಇದರಿಂದ ಸಂತ್ರಸ್ತೆ ಮಾನಸಿಕವಾಗಿ ನೊಂದು, ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ​

ಇದೀಗ, ಆರೋಪಿ ರವಿರಾಜ್​​ನನ್ನು ಬಂಧಿಸಿ, ನನ್ನ ಜೊತೆ ಮದುವೆ ಮಾಡಿಸಿ ಎಂದು ಸಂತ್ರಸ್ತೆ ಮತ್ತು ಆಕೆಯ ಪೋಷಕರು ಪೊಲೀಸ್ ಠಾಣೆ ಎದುರು ಧರಣಿ ಕೂತಿದ್ದಾರೆ.

ಹಿಂದಿನ ಲೇಖನರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಅಂತ್ಯ: ಇಂದಿನಿಂದ ಸರ್ಕಾರದ ಪೂರ್ಣ ಪ್ರಮಾಣದ ಕೆಲಸ ಆರಂಭ
ಮುಂದಿನ ಲೇಖನ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಜೂನ್ 9ರಂದು ಪದಗ್ರಹಣ