ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕೆರೆಮಕ್ಕಿ ಗ್ರಾಮದ ಸಂಜು (33) ಶೂಟೌಟ್ ನಲ್ಲಿ ಮೃತಪಟ್ಟಿರುವ ಯುವಕ.
ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಮೃತದೇಹದ ಸಮೀಪವೇ ತೋಟದ ಬೇಲಿಯಲ್ಲಿ ತೋಟಕೋವಿಯೊಂದು ಪತ್ತೆಯಾಗಿದೆ.
ಮೇ.16ರ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಇದು ಆಕಸ್ಮಿಕವಾಗಿ ಗುಂಡು ತಗುಲಿ ಆಗಿರುವ ಸಾವೇ ಅಥವಾ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆಯೇ ಎನ್ನುವ ಬಗ್ಗೆ ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೇ.
ಮೃತ ಸಂಜು ಕೆರೆಮಕ್ಕಿ ಗ್ರಾಮದ ದಿವಂಗತ ಜೂಲೇಗೌಡ ಎಂಬವರ ಪುತ್ರ. ಅವಿವಾಹಿತನಾಗಿದ್ದು, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.