ಮನೆ ಅಪರಾಧ ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

0

ರಾಯಚೂರು: ನಗರದ ತೀನ್ ಕಂದಿಲ್ ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ನಡೆದ ಘಟನೆ ನಡೆದಿದೆ.

Join Our Whatsapp Group

ಬೆಟ್ಟದಗೆರೆ (ಪರಕೋಟ) ನಿವಾಸಿ ಸಮೀರ್ ಪಾಲಿಯಾಸ್ ಕಿಂಗ್ ಕಾಂಗ್ (25) ಮೃತ ಯುವಕ. ಅಮನ್ ಎನ್ನುವ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಾಯಗೊಂಡ ಸಮೀರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.